ಕಾಯವೆಂಬ ಪಟ್ಟಣಕ್ಕೆ ಸತ್ಯವೆಂಬ ಕೋಟೆಯನಿಕ್ಕಿ
ಧರ್ಮಾಥಿರ್Àಕಾಮಮೋಕ್ಷಂಗಳೆಂಬುಕ್ಕಡದವರೆಚ್ಚತ್ತಿರಿ
ಭಯ ಘನ ಭಯ ಘನ.
ಅಜ್ಞಾನವೆಂಬ ತೀವ್ರ ಕತ್ತಲೆ ಕರ ಘನಕರ ಘನ.
ಒಂಬತ್ತು ಬಾಗಿಲ ಜತನವ ಮಾಡಿ
ಜ್ಞಾನಜ್ಯೋತಿಯ ಪ್ರಬಲವ ಮಾಡಿ ಪ್ರಬಲವ ಮಾಡಿ
ಐವರು ಕಳ್ಳರು ಕನ್ನವ ಕೊರೆವುತ್ತೈದಾರೆ.
ಸುಯಿಧಾನವಾಗಿರಿ ಜೀವಧನವ ಜತನವ ಮಾಡಿ ಜತನವ ಮಾಡಿ
ಬಳಿಕಿಲ್ಲ ಬಳಿಕಿಲ್ಲ.
ಆ ಪಟ್ಟಣದ ಮೂಲಸ್ಥಾನದ ಶಿಖರದ ಮೇಲಣ
ಬಾಗಿಲ ತೆರದು ನಡೆವುದೆ ಸುಪಥ, ಸ್ವಯಂಭುನಾಥನಲ್ಲಿರೆ.
ಇದನರಿತು ಮಹಾಮಹಿಮ ಅಮರಗುಂಡದ ಮಲ್ಲಿಕಾರ್ಜುನದೇವರಲ್ಲಿ
ಎಚ್ಚರಿಕೆಗುಂದದಿರಿ, ಎಚ್ಚರಿಕೆಗುಂದನಿರಿ.