ಗುರುವಿದ್ದಂತೆ ಪರರಿಗೆ ನೀಡಬಹುದೆ ?
ಮನೆಯ ಆಕಳು ಉಪವಾಸ ಇರಲಾಗಿ
ಪರ್ವತಕ್ಕೆ ಸೊಪ್ಪೆಯ ಹೊರಬಹುದೆ ?
ಎಂಬ ಪರವಾದಿ ನೀಕೇಳು.
ಗುರುವು ಶಿಷ್ಯಂಗೆ ಲಿಂಗವಕೊಟ್ಟು
ತಾನು ವ್ರತಗೇಡಿಯಾಗಿ ಹೋಗುವಲ್ಲಿ
ಪರರ ಪಾದೋದಕ ಪ್ರಸಾದದಿಂದ ಪವಿತ್ರನಾದಕಾರಣ,
್'ಪರರ ಕಂಡರೆ ತನ್ನಂತೆ ಕಾಣು' ಎಂದು
ಗುರುವು ಹೇಳಿದ ವಾಕ್ಯವ ಮರೆದಿರಲ್ಲ !
ಅಳಿಯ ಒಡೆಯರು, ಮಗಳು ಮುತ್ತೈದೆ,
ಮನೆದೇವರಿಗೆ ಶರಣೆಂದರೆ ಸಾಲದೆ ?
ಎಂಬ ಅನಾಚಾರಿಗಳ ಮಾತು ಅದಂತಿರಲಿ.
ಜಂಗಮದೇವರ ಪ್ರಾಣವೆಂಬ ಭಕ್ತರು
ಲಿಂಗಜಂಗಮದ ಕೈಯ ಹೂವು, ಹಣ್ಣು, ಕಾಯಿ, ಪತ್ರೆ,
ಹೋಗುವ ಬರುವ ಊಳಿಗವ ಕೊಂಬಾತ ಭಕ್ತನಲ್ಲ.
ಅಲ್ಲಿ ಪೂಜೆಗೊಂಬಾತ ಜಂಗಮವಲ್ಲ
ಇವರು ನಾಯಕ ನರಕಕ್ಕೆ ಯೋಗ್ಯರಯ್ಯಾ.
ಇವರಿಬ್ಬರ ಉರಿಲಿಂಗಪೆದ್ದಿಗಳರಸು ಒಲ್ಲನವ್ವಾ.