ಉಪನಿಷದ್ವಾಕ್ಯವೆನಬಹುದಲ್ಲದೆ, ಆ ಪರಬ್ರಹ್ಮವೆನಬಾರದು
ಸಮತೆ ಸಮಾಧಾನವೆಂಬುದು ಯೋಗದಾಗು ನೋಡಾ.
ಸಮತೆ ಸಮಾಧಾನ ನೆಲೆಗೊಳ್ಳದಿರ್ದಡೆ, ಆ ಯೋಗ ಅಜ್ಞಾನದಾಗು.
ಅಷ್ಟಶಿಲೆ ಸಹಸ್ರ ಋಷಿಯರು ಸಮತೆ ಸಮಾಧಾನ ನೆಲೆಗೊಳ್ಳದೆ,
ನಾನಾ ಯೋÀನಿಯಲ್ಲಿ ಬಂದರು.
ಮಹಾಲಿಂಗ ಕಲ್ಲೇಶ್ವರದೇವಾ,
ಸಮತೆ ನೆಲೆಗೊಂಡು, ಸಮಾಧಾನ ಸಹಜವಾದುದೆ ಮುಕ್ತಿ ಕ್ಷೇತ್ರ.