ಮಂತ್ರ ಭಿನ್ನವಾಯಿತ್ತೆಂದು ಕಂಥೆಯ ಬಿಡುವರೆ ಅರಿವುಳ್ಳವರು ?
ಅದು ದ್ವೇಷವಲ್ಲದೆ ಅರಿವಿಂಗೆ ಸಂಬಂಧವಲ್ಲ.
ಮಂತ್ರಮಧ್ಯೇ ಭವೇಲ್ಲಿಂಗಂ ಲಿಂಗಮಧ್ಯೇ ಭವೇನ್ಮಂತ್ರಂ
ಮಂತ್ರಲಿಂಗದ್ವಯೋರೈಕ್ಯಂ ಇಷ್ಟಲಿಂಗಂತು ಶಾಂಕರಿ || '
ಎಂದುದಾಗಿ,
ಆ ಮಂತ್ರ ಸರ್ವರ ಆಧಾರ, ಸರ್ವರ ಆತ್ಮಬೀಜವೆಂದರಿಯದೆ
ಕೇಸರಿಯ ಕನಸ ಕಂಡ ವಾರಣದಂತೆ, ಈ ಭಾಷೆಹೀನರಿಗೇಕೆ
ಶಂಭುಜಕ್ಕೇಶ್ವರನು ?