ಐಕ್ಯಸ್ಥಲದ ಲೇಪಜ್ಞಾನ ವಿವರ :
ಅಪ್ಪು ಆವಾವ ಪಾಕಕ್ಕೂ ತಪ್ಪದೆ ಸಾರವ ಕೊಡುವಂತೆ
ತಥ್ಯಮಿಥ್ಯವಾದ ದ್ರವ್ಯಕ್ಕೆ ಹೆಚ್ಚುಕುಂದನರಿಯದಿಪ್ಪಂತೆ
ವಾಯು ಸುಗುಣ ದುರ್ಗುಣವೆನ್ನದೆ
ತನ್ನಯ ಸಹಜದಿಂದ ಸಂಚರಿಸುವಂತೆ
ಅಗ್ನಿಗೆ ಕಾಷ* ಸರಿಸ ಡೊಂಕೆನ್ನದೆ ಮಲಿನ ಅಮಲಿನವೆನ್ನದೆ
ಆವ ದ್ರವ್ಯ ದೃಷ್ಟದಲ್ಲಿ ಸಿಕ್ಕಿದಡೂ
ಭೇದಿಸಿ ವೇಧಿಸಿ ಸುಡುವುದಾಗಿ.
ಇಂತಿವು ತ್ರಿವಿಧಸ್ಥಲದಂತೆ ಇಪ್ಪುದು ಐಕ್ಯನ ಅರ್ಪಿತ ಸ್ಥಲಭೇದ
ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.