ಚಕ್ರಿಯ ಕುಲವಾಸದ ಮೃತ್ತಿಕೆಯಂತೆ,
ಏನ ನೆನೆದಡೂ ಅಪ್ಪುವಾರುವುದಕ್ಕೆ ಮುನ್ನವೆ,
ಚಿತ್ತದಲ್ಲಿ ತೋರುವ ತೋರಿಕೆ.
ಚಿತ್ರಕುಂಭಂಗಳ ಒಪ್ಪೊಪ್ಪದಲ್ಲಿ ಅಹ ತೆರನಂತೆ,
ವಸ್ತು ತನ್ನಯ ಭಾವದಲ್ಲಿ ನಿಶ್ಚಯವಾಗಿ ನಿಂದಲ್ಲಿ,
ಕೃತ್ಯ ಅಕೃತ್ಯವೆಂಬ ಹೆಚ್ಚುಕುಂದಿಲ್ಲ.
ಕರ್ಮವಿಲ್ಲದ ಪೂಜೆ,
ನಿರ್ಮಲವೆಂಬುದು ತೋರದ ಆ ಜಡ,
ಉಮ್ಮಳ ದುಮ್ಮಳವೆಂಬ ಉಭಯವಳಿದ ಸುಮ್ಮಾನಸುಖಿಗೆ
ಕರ್ಮ ನಿರ್ಮಲವೆಂಬುದೊಂದೂ ಇಲ್ಲ.
ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ,
ಅರಿ ನಿಜಾ[ತ್ಮಾ] ರಾಮರಾಮನಾ.