ವೇದ ಶಾಸ್ತ್ರಕ್ಕೆ ಹಾರುವನಾಗಿ,
ವೀರ ವಿತರಣಕ್ಕೆ ಕ್ಷತ್ರಿಯನಾಗಿ,
ಸರ್ವವನಾರೈದು ನೋಡುವಲ್ಲಿ,
ವೈಶ್ಯನಾಗಿ ವ್ಯಾಪಾರದೊಳಗಾಗಿ,
ಕೃಷಿಯ ಮಾಡುವುದಕ್ಕೆ ಶೂದ್ರನಾಗಿ.
ಇಂತೀ ಜಾತಿಗೋತ್ರದೊಳಗಾದ ನೀಚ ಶ್ರೇಷ*ವೆಂಬ
ಎರಡು ಕುಲವಲ್ಲದೆ,
ಹೊಲೆ ಹದಿನೆಂಟುಜಾತಿಯೆಂಬ ಕುಲವಿಲ್ಲ.
ಬ್ರಹ್ಮವನರಿದಲ್ಲಿ ಬ್ರಾಹ್ಮಣ.
ಸರ್ವಜೀವಹತ ಕರ್ಮಕ್ಕೊಳಗಾಗಿದ್ದಲ್ಲಿ ಸಮಗಾರ.
ಈ ಉಭಯವನರಿದು ಮರೆಯಲಿಲ್ಲ.
ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ,
ಅರಿ ನಿಜಾ[ತ್ಮಾ] ರಾಮ ರಾಮನಾ.