ಸಾಂಖ್ಯ ಶ್ವಪಚ, ಅಗಸ್ತ್ಯ ಕಬ್ಬಿಲ,
ದೂರ್ವಾಸ ಮಚ್ಚಿಗ, ದಧೀಚಿ ಕೀಲಿಗ,
ಕಶ್ಯಪ ಕಮ್ಮಾರ, ರೋಮಜ ಕಂಚುಗಾರ,
ಕೌಂಡಿಲ್ಯ ನಾವಿದನೆಂಬುದನರಿದು,
ಮತ್ತೆ ಕುಲವುಂಟೆಂದು ಛಲಕ್ಕೆ ಹೋರಲೇತಕ್ಕೆ ?
ಇಂತೀ ಸಪ್ತಋಷಿಯರುಗಳೆಲ್ಲರೂ
ಸತ್ಯದಿಂದ ಮುಕ್ತರಾದುದನರಿಯದೆ,
ಅಸತ್ಯದಲ್ಲಿ ನಡೆದು, ವಿಪ್ರರು ನಾವು ಘನವೆಂದು
ಹೋರುವ ಹೊತ್ತುಹೋಕರ ಮಾತೇತಕ್ಕೆ ?
ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ,
ಅರಿ ನಿಜಾ[ತ್ಮಾ] ರಾಮ ರಾಮನಾ.