ಹೋತು ಹುಸಿ, ಆಡು ಬಹುಮಾತಿನ ನೀತಿ,
ಕುರಿ ಸಕಲೇಂದ್ರಿಯದ ನೆಲ ಹೊಲ, ತಗರು ತಥ್ಯಮಿಥ್ಯದ ಹೋರಟೆ,
ಹುಲಿ ದ್ವೇಷದಾಗರ, ತೋಳ ಕೊಂದು ತಿಂಬ ಕಾಟ.
ಚೋರ ಮೃತ್ಯು ಇಂತಿವು ಮೊದಲಾದ
ಬಹುವಿಧದ ಪ್ರಕೃತಿಗಳಲ್ಲಿ ಕಾಯದ ನೆಲಹೊಲನಲ್ಲಿ,
ಸಕಲೇಂದ್ರಿಯವೆಂಬ ಹಿಂಡು ಮಂದೆಯಾಗಿವೇಕೊ ?
ಇದರ ಸಂಗವ ಬಿಡಿಸು, ನಿಮ್ಮ ನಿಜದಂಗವ ತೋರಿ,
ಭವಪಾಶದಂಗವ ಹರಿದು, ನಿಮ್ಮ ಘನಲಿಂಗದಲ್ಲಿರಿಸು,
ನೆರೆ ವೀರಬೀರೇಶ್ವರಾ.