ಗಿಳಿಯ ಗರ್ಭದಲ್ಲಿ ಮಾರ್ಜಾಲ ಹುಟ್ಟಿ ಹಾವಿನ ತಲೆಯ ಮುಟ್ಟಲು ಹೆಡೆಯನೆಗೆದು ಮಾಣಿಕವ ಕಚ್ಚಿ ಎರಡುದಾರಿಯ ಕಟ್ಟಿ ಆಡಲು ಪುರದ ಜನರು ಭೀತಿಗೊಂಡು ನೋಡುವ ಸಮಯದಲ್ಲಿ ಮಾಣಿಕ ಹಾವ ನುಂಗಿ ಜನರ ಹೊಯ್ದು ಒಯ್ಯಲು, ಗಿಳಿ ಸತ್ತು ಗುರುನಿರಂಜನ ಚನ್ನಬಸವಲಿಂಗ ತಾನೆಯಾಯಿತು.
ಗಂಡಗಿಕ್ಕದೆ ಮಾಡಿ ತಪ್ಪಿಸಿ ತಿಂಬ ದಿಂಡೆಹೆಂಗಳೆಯಂತೆ ಕರ್ತುಗಳಿಗೆ ಅರ್ಥವ ಸವೆಯದೆ ಸಟೆವೆರೆದು ಬಾಳುವ ಕುಟಿಲಗಳ್ಳರಿಗೆಂತಪ್ಪುದಯ್ಯಾ ಭಕ್ತಿ ? ಸತ್ಯ ಧನವ ನಿತ್ಯ ನಿತ್ಯವರಿದು ಮರೆದಿತ್ತಡೆ ಕರ್ತುವೊಲಿವ ನಮ್ಮ ಗುರುನಿರಂಜನ ಚನ್ನಬಸವಲಿಂಗಾ.