ಅಪ್ಪುವಿನ ಶಿಲೆಯ, ಉಳಿಯ ಮೊನೆಯಲ್ಲಿ ಚಿತ್ರಿಸಬಹುದೆ ?
ಅರಗಿನ ಪಟವ, ಉಳಿಯ ಮೊನೆಯಲ್ಲಿ ಅಕ್ಷರವ ಬರೆಯಬಹುದೆ ?
ಮೃತ್ತಿಕೆಯ ಹರುಗೋಲನೇರಿ, ನದಿಯ ತಪ್ಪಲಿಗೆ ಹೋಗಬಹುದೆ ?
ನಿಜನಿಶ್ಚಯವನರಿಯದವನ ವಾಚಾರಚನೆ ಇಷ್ಟಲ್ಲದಿಲ್ಲ.
ನಿಜತತ್ವವನರಿದವನ ವಾಚಾರಚನೆಯ ಕುರುಹೆಂತುಟೆಂದಡೆ !
ಶಿಲೆಯೊಳಗಣ ಸುರಭಿಯಂತೆ, ಪ್ರಳಯದೊಳಗಾಗದ ನಿಜನಿವಾಸದಂತೆ,
ಆಯದ ಗಾಯದಂತೆ, ಸಂಗಾಯದ ಸುಖದಂತೆ.
ಇಂತೀ ಭಾವರಹಿತವಾದ ಭಾವಜ್ಞನ ತೆರ,
ಕೂಗಿಂಗೆ ಹೊರಗು, ಮಹಾಮಹಿಮ ಮಾರೇಶ್ವರಾ.