ಅಥವಾ
(1) (0) (0) (0) (2) (2) (0) (0) (0) (0) (0) (0) (1) (0) ಅಂ (0) ಅಃ (0) (1) (0) (1) (0) (0) (0) (0) (0) (0) (0) (0) (0) (0) (0) (0) (1) (0) (0) (0) (1) (0) (0) (2) (0) (0) (0) (1) (0) (0) (1) (0) (0) (0) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ವಿಘ್ನೇಶ್ವರ ಹರನ ಮಗನೆಂಬ ಪಂಚಮಹಾಪಾತಕರ ನುಡಿಯ ಕೇಳಲಾಗದು. ಪಾರ್ವತಿ ಹರನ ಸತಿಯೆಂಬ ಲಿಂಗದ್ರೋಹಿಗಳ ನೆನೆಯಲಾಗದು. ಬಹುರೂಪಿ ಹರನ ಸರಿಯೆಂಬ ಗುರುದ್ರೋಹಿಗಳ ನೆನೆಯಲಾಗದು. ಅಂದೆಂತೆಂದಡೆ:`ಯತ್ರ ಜೀವಾತ್ಮ ತತ್ರ ಶಿವ' ಎಂದೆನಿಸಿಕೊಂಬಾತನೊಬ್ಬ ಗಣೇಶ್ವರನು. ಭೂಮಿಪೀಠಾಕಾಶವಾಗಿರ್ದಾತನೊಬ್ಬ ಗಣೇಶ್ವರನು. ಸಿರಿಯಾಳನ ಮಗನ ಬಾಣಸವ ಮಾಡಿಸಿದಾತನೊಬ್ಬ ಗಣೇಶ್ವರನು. ಅರ್ಜುನನ ಕೂಡ ಯುದ್ಧವ ಮಾಡಿ, ತನ್ನ ಸತಿಯಳಿಗೆ ತೋರಿಸಿದಾತನೊಬ್ಬ ಗಣೇಶ್ವರನು. ಅಂಗಜನ ಸಂಹಾರವ ಮಾಡಿದಾತನೊಬ್ಬ ಆದಿರುದ್ರನೆಂಬ ಗಣೇಶ್ವರನು. ದಕ್ಷನ ಸಂಹಾರವ ಮಾಡಿದಾತನೊಬ್ಬ ವೀರಭದ್ರನೆಂಬ ಗಣೇಶ್ವರನು. ಹತ್ತು ಅವತಾರ ವಿಷ್ಣುವಿಂಗೆ, ಅನಂತ ಅವತಾರ ಬ್ರಹ್ಮಂಗೆ. ಇಂತಿವರೆಲ್ಲರಿಗೂ ಕಾಲಚಕ್ರ ಕರ್ಮಚಕ್ರ ನಾದಚಕ್ರ ಬಿಂದುಚಕ್ರ. ಈ ನಾಲ್ಕೂ ಪ್ರಳಯಚಕ್ರವೆಂದೆನಿಸಿಹವು. ಇಂತಿವರೊಳಗಾದವರೆಲ್ಲರು ಇನ್ನುಳಿದವರು ನರದೇಹಿಗಳಿಗೆ ಪ್ರಳಯವು. ಉಪಮಿಸಲಾಗದು, ಅಜಾತ ಪವಿತ್ರ ನಿರ್ಲೇಪ [ಜಂಗಮಲಿಂಗ ಪ್ರಭುವೆ].
--------------
ಮಾರೇಶ್ವರೊಡೆಯರು