ಊರೊಳಗಣ ಹೊಲೆಯ, ಊರ ಹೊರಗಣ ಕುಲಜ.
ಇವರಲ್ಲಿ ಆರು ಹಿರಿ[ಯರೆಂಬುದ] ಬಲ್ಲಡೆ ಲಿಂಗಪ್ರಾಣಸಂಬಂಧಿಯೆಂಬೆ.
ಅರಿಯದಿರ್ದಡೆ ಪ್ರಾಣಲಿಂಗಸಂಬಂಧಿಯೆಂಬೆ.
ಇಂತೀ ಉಭಯವನರಿದ ಶರಣ ಸರ್ವಾಂಗಲಿಂಗಸಂಬಂಧಿ.
ಆತಂಗೆ ತತ್ತುಗೊತ್ತಿಲ್ಲ, ಇಷ್ಟ ಪ್ರಾಣವೆಂಬ ಗುತ್ತಗೆಯವನಲ್ಲ.
ಕರ್ಪುರ ಉರಿ ಉಭಯರೂಪು ತನ್ಮಯವಾದಂತೆ
ಕಮಠೇಶ್ವರಲಿಂಗದಲ್ಲಿ ಸದಾಸನ್ನದ್ಭನಾದ ಶರಣನು.