ಅಥವಾ
(3) (0) (0) (1) (0) (0) (0) (0) (9) (0) (0) (1) (0) (0) ಅಂ (0) ಅಃ (0) (0) (0) (0) (0) (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (1) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಯ್ಯಾ, ಜೀವಾತ್ಮ ಭೇದವಾದಮಂ ಪೇಳ್ವೆನಯ್ಯಾ : ಜೀವ ಬೇರೆ, ಆತ್ಮ ಬೇರೆ ಎಂದು ಹೇಳುವ[ವು] ಹಲವು ಶಾಸ್ತ್ರ ; ಜೀವಾತ್ಮ ಐಕ್ಯ ಹೇ[ಳುವವು] ಹಲವು ಶಾಸ್ತ್ರ. ಅ[ದು] ಎಂತೆಂದಡೆ: ಸರ್ವ ಚೇತನದಲ್ಲಿಯು ಉಂಟು ಎಂದು ಹೇಳುವವು ಜೀವವು, ಶಿವಶಾಸ್ತ್ರ ಇದಕ್ಕೆ ಸಾಕ್ಷಿ : ಅಣೋರಣೀಯಾ[ನ್] ಮಹತೋ ಮಹೀಯಾ[ನ್] ಎಂದು ಶ್ರುತಿಯುಂಟಾಗಿ, ಇದಂ ತಿಳಿದು, ಭೇದವಾದಿಗಳು ಸರ್ವಜೀವರಲ್ಲಿಯು ಆತ್ಮವುಂಟಾದಡೆಯು ಪಶುಜೀವಜಂತುಗಳಿಗೆ ನಮಸ್ಕಾರವ ಮಾಡಬಾರದೆ ? ಎಂದು ಹೇಳುವ ಮಾಯಾವಾದಿಗಳು ನೀವು ಕೇಳಿ ; ಅದು ಎಂತೆಂದಡೆ : ಎಲಾ ಎಲಾ, ಉಚ್ಫಿಷ್ಟದಲ್ಲಿಯು ಅರ್ಕನ ಪ್ರಭೆ ಬಿದ್ದು ರಸ ಬತ್ತುವದು. ಅದರ ರಸಾಸ್ವಾದವು ಅರ್ಕಂಗೆ ಮುಟ್ಟುವುದೆ ? ಎಲಾ ಎಲಾ, ಸಿಲಹದಲ್ಲಿಯು ಸೂರ್ಯಪ್ರಭೆಯುಂಟು. ಅಲ್ಲಿ ವಹ್ನಿಯು ಪುಟ್ಟುವು]ದೆ?] ಇದರಂತೆ, ಸರ್ವ ಜೀವಜಂತುಗಳಲ್ಲಿ ಮಾಯಾವಾದಿಗಳಲ್ಲಿ ಆತ್ಮಪರೀಕ್ಷೆಯಿಲ್ಲದವರಲ್ಲಿ [ದು]ಷ್ಟ ದುರ್ಜನರಲ್ಲಿ ಶಿವಭಕ್ತರಾಗಿ ಲಿಂಗವ ಧರಿಸಿ ದೇವರಾದರು ಸರಿಯೆ, [ಬ್ರಾ]ಹ್ಮರಾಗಿ ಯಜ್ಞೋಪವೀತವ ಹಾಕಿಕೊಂಡಿದ್ದರು ಸರಿಯೆ, ಯತಿಗಳಾಗಿ ಮಂಡೆ ಬೋಳಿಸಿಕೊಂಡಿದ್ದರು ಸರಿಯೆ, ಮಾರ್ಗ ತಪ್ಪಿ ನಡೆವ ಜೀವಜಂತುಗಳಲ್ಲಿ ಸಿಲಹ ಉಚ್ಫಿಷ್ಟದ ಮೇಲೆ ಸೂರ್ಯನ ಪ್ರಭೆ ಬಿದ್ದಂತೆ ಆತ್ಮ ಇದ್ದ ಕಾರಣ ಇವರಿಗೆ ಕೈಮುಗಿಯಲಾಗದು ಕಾಣಿರಯ್ಯಾ ! ಇ[ವ]ರೊಳಗೆ ಶಿವಯೋಗಿಗಳು ದಾರೆಂದು ಕೇಳುವ ಮಾಯಾವಾದಿ ಕೇಳಲಾ. ಅದು ಎಂತೆಂದಡೆ: ಸೂರ್ಯನ ಪ್ರಕಾಶಕ್ಕೆ ಬಿಲದ್ವಾರವ ಸಿಲಹಂ ಪಿಡಿಯೆ ಅರ್ಕನ ಪ್ರಕಾಶಕ್ಕೆ ವಹ್ನಿ ಪುಟ್ಟೆ ಸರ್ವಕಾಷ*ವನು ಸುಡುವದು ಕಾಣೆಲಾ. ಶಿವಾತ್ಮ ಐಕ್ಯವ ಮಾಡಿದಾ ಶಿವಯೋಗಿಗಳಲ್ಲಿ ಸರ್ವಕರ್ಮೇಂದ್ರಿಯ ಈ ತೆರದಲ್ಲಿ ಸುಟ್ಟ ಕಾರಣ ನಿರ್ಮಳಕಾಯರಾದರು. ಇಂತಪ್ಪ ಜೀವಾತ್ಮವ ಐಕ್ಯವ ಮಾಡಿದ ಶಿವಯೋಗಿಗಳಲ್ಲಿ ನಮಸ್ಕರಿಸಬಹುದು. ಇಂತಾ ಜೀವಾತ್ಮ ವೇದವ ತಿಳಿಯದೆ 'ನಾ ಬ್ರಾಹ್ಮಣ' 'ನಾ ಶಿವಭಕ್ತ'ನೆಂದು ಹೇಳಿಕೊಂಡು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ
--------------
ಕೂಡಲಸಂಗಮೇಶ್ವರ
ಅಯ್ಯಾ, `ಬ್ರಹ್ಮಲಿಖಿತವೇ ದೊಡ್ಡಿತ್ತು' ಎಂದು ಪೇಳುವಿರಿ, 'ಬ್ರಹ್ಮಲಿಖಿತಕ್ಕೆ [ಇದಿರು] ಯಾರಾರು ಇಲ್ಲ' ವೆಂದು ಹೇಳುವಿರಿ, ನೀವು ಕೇಳಿರಯ್ಯಾ: ಇಂಥ ಬ್ರಹ್ಮಲಿಖಿತವ ಗೆದ್ದವರು ನಮ್ಮ ಶಿವಗಣಾಧೀಶ್ವರರಲ್ಲದೆ ಮಿಕ್ಕಿನವರು ಗೆದ್ದದ್ದು ಇಲ್ಲಾ ಕಾಣಿರಯ್ಯಾ! ಅದು ಎಂತೆಂದಡೆ: ಎಲೆ, ಬ್ರಹ್ಮನು ಶಿವನಂ ಕಾಣಲರಿಯದೆ ತತ್ತ್ವಸಾರವ ತಿಳಿಯಲರಿಯದೆ ಶಿರವ ಭೇದಿಸಿಕೊಂಡ. ಇಂಥ ಬ್ರಹ್ಮಮುಖವಾದ ವೇದಗಳು ರಥಕ್ಕೆ ವಾಜಿಯಾಗಿ ಹೋದವು. ಇಂಥಾತ್ಮನು ತತ್ತ್ವಸಾರವ ತಿಳಿಯದೆ, ಅರಿಯದೆ, ನಿಜವಸ್ತುವಾದ ಲಿಂಗಮಂ ಮರೆದು, ಶಿರವ ಭೇದಿಸಿಕೊಂಡ. ಅವ ನಮ್ಮ ಪ್ರಮಥ ಗಣಾಧೀಶ್ವರರಿಗೆ ಅದೃಷ್ಟವ ಬರೆವುದಕ್ಕೆ ಕಾರಣಕರ್ತನೆ ? ಅಥವಾ ಆ ಕ್ಷಣ ಮಾತ್ರದಲ್ಲಿ ಪುತ್ರಜನನವಾದ ಕಾಲದಲ್ಲಿಯು ಬ್ರಹ್ಮನ ಬರ [ಹ ಹೋ]ಹಾಗಾಗಲಿಯೆಂದು, ಮಹಾಗುರುವು ಬಂದು ತ್ರಿಪುಂಡ್ರವಾದ ಮೂರು ಬೆರಳಿಂದ ಬ್ರಹ್ಮಲಿಖಿತವಂ ದಟ್ಟಿಸಿ ಪಣೆಗಿಟ್ಟು, ಮಾಂಸಪಿಂಡವಂ ಪೋಗಿ[ಸಿ] ಮಂತ್ರಪಿಂಡವ ಮಾಡುವರಲ್ಲದೆ ಮಿಕ್ಕವರಿಂದಾಗದು ಕಾಣಿರಯ್ಯಾ. ಆ ಪ್ರಮಥ ಗಣಾಧೀಶ್ವರರು ನಡೆದರೆಂದು ಈಗ ಮನುಜರು 'ನಾನೂ ನಡೆದೇನು' 'ನೀನೂ ನಡೆದೇನು' ಎಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಅಯ್ಯಾ, ಯತಿಯತ್ವವ ಪಡೆದೆನೆಂಬೋ ಮನುಜನೇ, ನೀ ಕೇಳು : ನಿನ್ನ 1ಯತಿಯತ್ವ1ದ ಬಗೆ ಎಂತೆಲಾ ? ಬರಿದೆ ದ್ರವ್ಯಕ್ಕೆ ಆಶೆಮಾಡಿ, ಪರರ ಕಾರ್ಪಣ್ಯದಿಂದ ಕಾಡಿ ಬೇಡಿ, ದ್ರವ್ಯವ ಗಳಿಸಿಕೊಂಡು, ಜನರ ಕಟ್ಟಿಕೊಂಡು ಬಡಿವಾರದಿಂದ ತಿರುಗಿದ ಬಳಿಕ, ನಿನಗೆ ಯತಿಯತ್ವವು ಎಲ್ಲೈತೆಲಾ ? ಅದು ಎಂತೆಂದರೆ, ಯತಿಯತ್ವವ ಪೇಳುವೆನು ಕೇಳೆಲಾ : ಯತಿ ನೀನಾದ ಬಳಿಕ ತನುವಿನ ಹಂಗು ಹರಿಯಬೇಕು ; ಮನವ ಘನಲಿಂಗಕ್ಕೆ ಕಟ್ಟಿಹಾಕಬೇಕು ; ಧನವ ಸ್ವಪ್ನದಲ್ಲಿ ಮುಟ್ಟಲಾಗದು ; ಅನ್ನದ ಆಸೆಯ ಬಿಡಬೇಕು ; ಚಿನ್ಮಯನಾಗಿ ನಡೆಯಬೇಕು ; ಚಿಂತೆಯ ಮರೆತು ವೈರಾಗ್ಯದಿಂದಿರಬೇಕು ; ಕಾಮದ ಹಂಗ ಕಳೆಯಬೇಕು ; ಕರ್ಮೇಂದ್ರಿಯಂಗಳ ಸುಡಬೇಕು ; ಲಿಂಗದಲ್ಲಿ ಕರುಣ ಇರಬೇಕು. ಸ್ಫಟಿಕದಂತೆ ನಿರ್ಮಳ ಕಾಯನಾಗಿ, ನಿಶ್ಚಿಂತನಾಗಿ, ಮೋಕ್ಷವ ಕಂಡಡೆ ಯತಿವರನೆಂದು ನಮೋ ಎಂಬುವೆನಯ್ಯಾ ! ಬರಿದೆ ಯತಿ ಎನಿಸಿಕೊಂಡು ಕೋಪಾಟೋಪದೊಳು ಬಿದ್ದು ಹೊರಳಾಡುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ