ಒ ಪದದಿಂದ ಪ್ರಾರಂಭವಾಗುವ ವಚನಗಳು:
ಒಂದೆ ಕೋಲಿನಲ್ಲಿ ಮೂರುಲೋಕ ಮಡಿಯಿತ್ತು.ಬಿಲ್ಲಿನ ಕೊಪ್ಪು ಹಾರಿ ನಾರಿ ಸಿಡಿದು ನಾರಾಯಣನ ತಾಗಿತ್ತು.ನಾರಾಯಣನ ಹಲ್ಲು ಮುರಿದು ಬ್ರಹ್ಮನ ಹಣೆಯೊಡೆಯಿತ್ತು.ಹಣೆ ಮುರಿದು ರುದ್ರನ ಹಣೆಗಿಚ್ಚಿನಲ್ಲಿ ಬಿದ್ದಿತ್ತು, ನಷ್ಟವಾಯಿತ್ತು;ಗೊಹೇಶ್ವರನ ಶರಣ ಅಲ್ಲಮ ಬದುಕು ನಾಮ ನಷ್ಟವಾಯಿತ್ತು.
ಒಂದು ಧನುವಿಂಗೆ ಮೂರಂಬ ಹಿಡಿದೆ.ಒಂದು ಬಾಣದ ಬಿಡಲಾಗಿ ಪದ್ಮೋದ್ಭವನ ಸೃಷ್ಟಿಯ ಕಟ್ಟಿತ್ತು.ಮತ್ತೊಂದು ಬಾಣವ ಬಿಡಲಾಗಿ ಪದ್ಮನಾಭನ ಹೆಡಗಯ್ಯ ಕಟ್ಟಿತ್ತು.ಕಡೆಯ ಬಾಣ ರುದ್ರನ ಹಣೆಯನೊಡೆದುಅಲಗು ಮುರಿಯಿತ್ತು; ಗರಿ ಜಾರಿತ್ತು;ನಾರಿಯ ಹೂಡುವ ಹಿಳುಕು ಹೋಳಾಯಿತ್ತು;ಗೊಹೇಶ್ವರನ ಶರಣ ಅಲ್ಲಮ ಹಿಡಿದ ಬಿಲ್ಲುಮುರಿಯಿತ್ತು.