ಅಥವಾ
(8) (2) (1) (0) (1) (0) (0) (0) (1) (0) (0) (3) (1) (0) ಅಂ (5) ಅಃ (5) (4) (0) (2) (0) (0) (1) (0) (3) (0) (0) (0) (0) (0) (0) (0) (8) (0) (2) (1) (2) (1) (0) (3) (4) (5) (0) (0) (0) (1) (5) (2) (0) (10) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಒಡೆಯರು ಭಕ್ತರಿಗೆ ಸಲುವ ಸಹಪಙô್ತಯಲ್ಲಿ, ಗುರು ಅರಸೆಂದು, ತನ್ನ ಪರಿಸ್ಪಂದವೆಂದು ರಸದ್ರವ್ಯವ ಎಸಕದಿಂದ ಇಕ್ಕಿದಡೆ, ಅದು ತಾನರಿದು ಕೊಂಡಡೆ ಕಿಸುಕುಳದ ಪಾಕುಳ. ಅಲ್ಪ ಜಿಹ್ವೆಲಂಪಟಕ್ಕೆ ಸಿಕ್ಕಿ ಸಾವ ಮತ್ಸ್ಯದಂತೆಯಾಗದೆ- ಈ ಗುಣವ ನಿಶ್ಚಯಿಸಿದಲ್ಲಿ ಏಲೇಶ್ವರಲಿಂಗವನರಿಯಬಲ್ಲ.
--------------
ಏಲೇಶ್ವರ ಕೇತಯ್ಯ
ಒಡೆಯರು ಭಕ್ತರು ತಾವೆಂದು ಅಡಿಮೆಟ್ಟಿ ಹೋಹಲ್ಲಿ ತಡೆಯಿತು ಶಕುನವೆಂದುಳಿದಡೆ, ಕಾಗೆ ವಿಹಂಗ ಮಾರ್ಜಾಲ ಮರವಕ್ಕಿ ಗರ್ದಭ ಶಶಕ ಶಂಕೆಗಳು ಮುಂತಾದ ಸಂಕಲ್ಪಕ್ಕೊಳಗಾದಲ್ಲಿ ವ್ರತಕ್ಕೆ ಭಂಗ, ಆಚಾರಕ್ಕೆ ದೂರ. ಅದೆಂತೆಂದಡೆ: ಅಂಗಕ್ಕೆ ಆಚಾರವ ಸಂಬಂಧಿಸಿ, ಮನಕ್ಕೆ ಅರಿವು-ಅರಿವಿಂಗೆ ವ್ರತವ ಮಾಡಿದಲ್ಲಿ, ಬೇರೊಂದು ಪರಿಹರಿಸುವ ನಿಮಿತ್ತವುಂಟೇರಿ ಇಂತೀ ಸತ್ಕ್ರಿಯಾವಂತಗೆ ಕಷ್ಟಜೀವದ ಲಕ್ಷದಲ್ಲಿ ಚಿತ್ತ ಮೆಚ್ಚಿಹನ್ನಕ್ಕ ಆತನು ಆಚಾರಭ್ರಷ್ಟ, ಏಲೇಶ್ವರಲಿಂಗಕ್ಕೆ ದೂರ.
--------------
ಏಲೇಶ್ವರ ಕೇತಯ್ಯ
ಒಡೆಯರು ಭಕ್ತರಲ್ಲಿ ಕೃಷಿಯಿಲ್ಲದೆ ಬೇಡಿ ತಂದು, ತನ್ನ ಮಡದಿ ಮಕ್ಕಳ ಹೊರೆದು, ಮಿಕ್ಕಾದುದ ಒಡೆಯರಿಗಿಕ್ಕಿಹೆನೆಂಬ ಅಡುಗೂಲಿಕಾರನ ಗಂಜಿಗುಡಿಹಿಯ ಭಕ್ತಿ ತನ್ನ ಸಂಸಾರದ ಅಡಿಗೆಯೊಳಗೆ ಅಡಗಿತ್ತು, ಇದು ಬೆದಕಿದಡೆ ಹುರುಳಿಲ್ಲ. ನನ್ನಿಯೆತ್ತಿಗೆ ಎನ್ನ ಮಣ್ಣೆತ್ತು ಘನವೆನಬೇಕು, ಅದು ಭಕ್ತಿಪಕ್ಷದ ಓಸರ. ಬಿಡಲಿಲ್ಲ, ಅರಿದು ಹಿಡಿಯಲಿಲ್ಲ. ಆ ಅಂಗವ, ಒಡಗೂಡುವ ಶರಣರು ನೀವೆ ಬಲ್ಲಿರಿ. ಎನಗದು ಸಂಗವಲ್ಲ ಏಲೇಶ್ವರಲಿಂಗಕ್ಕೆ.
--------------
ಏಲೇಶ್ವರ ಕೇತಯ್ಯ