ಅಥವಾ
(8) (2) (1) (0) (1) (0) (0) (0) (1) (0) (0) (3) (1) (0) ಅಂ (5) ಅಃ (5) (4) (0) (2) (0) (0) (1) (0) (3) (0) (0) (0) (0) (0) (0) (0) (8) (0) (2) (1) (2) (1) (0) (3) (4) (5) (0) (0) (0) (1) (5) (2) (0) (10) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಜಂಗಮದ ಮುಂದಿಟ್ಟು ಕೊಟ್ಟು ಕೊಂಡೆಹೆನೆಂಬ ಸರ್ವಸಮಯಾಚಾರ ಸಂಪತ್ತಿನಿರವು: ಮಜ್ಜನ ಭೋಜನ ಅಂದಳ ಛತ್ರ ಚಾಮರ ಕರಿ ತುರಗ ದರ್ಪಣ ಹಲುಕಡ್ಡಿ ನಖಚಣ ಪರಿಮಳ ಗಂಧ ಮೆಟ್ಟಡಿ ತಾಂಬೂಲ ರತ್ನಾಭರಣ ಮೆತ್ತೆ ಶಯನ ಸ್ತ್ರೀಸಂಸರ್ಗ ಒಡೆಯಂಗೆ ಆಯಿತ್ತೆಂಬುದ ಕೇಳಿ, ಆ ಒಡೆಯನ ವಾಚಾಪ್ರಸಾದದಿಂದ ಮಹಾಪ್ರಸಾದವೆಂದು ತನ್ನ ಸ್ವಸ್ತ್ರೀಗೆ ಕೂಟಸ್ಥನಾಗಬೇಕು. ಇಂತೀ ಭಾವ ಸರ್ವಸಮಯಾಚಾರ. ಈ ವರ್ತಕದಂಗ ನಿಂದಾತನ ಸಂಗ, ಏಲೇಶ್ವರದಂಗ ಉಮೇಶ್ವರಲಿಂಗವು ಆ ಭಕ್ತನಂಗ.
--------------
ಏಲೇಶ್ವರ ಕೇತಯ್ಯ
ಜಂಗಮಪ್ರಸಾದ ಮುಂತಾಗಿಯಲ್ಲದೆ ಒಲ್ಲೆನೆಂಬ ಭಕ್ತನ ಕಟ್ಟಳೆಯ ವಿವರ: ಶಿಶು, ಬಂಧುಗಳು, ಚೇಟಿ, ಬೆವಸಾಯವ ಮಾಡುವವರು ಮುಂತಾದ ಇವರಿಗೆಲ್ಲಕ್ಕೂ ಒಡೆಯರಿಗೆ ಸಲುವುದಕ್ಕೆ ಮುನ್ನವೆ ಸೀತಾಳ ಶಿವದಾನವೆಂದು ಇಕ್ಕಬಹುದೆ? ಒಡೆಯರ ಕಟ್ಟಳೆಯಠಾವಿನಲ್ಲಿ ನಿಮ್ಮ ಕೃತ್ಯಕ್ಕೆ ನಿಮ್ಮ ಮನವೆ ಸಾಕ್ಷಿ. ಇದು ದಂಡವಲ್ಲ, ನೀವು ಕೊಂಡ ಅಂಗದ ನೇಮ. ಇದಕ್ಕೆ ನಿಮ್ಮ ಏಲೇಶ್ವರಲಿಂಗವೆ ಸಾಕ್ಷಿ.
--------------
ಏಲೇಶ್ವರ ಕೇತಯ್ಯ
ಜಲ ನೆಲ ಶಿಲೆ ತಾನಾಡುವ ಹೊಲ ಮುಂತಾಗಿ ಸರ್ವವೆಲ್ಲವು ಲಿಂಗಾಯತಸಂಬಂಧವಾಗಿ, ಭವಿಸಂಗ, ಭವಿನಿರೀಕ್ಷಣೆ, ಭವಿ ಅಪೇಕ್ಷೆ, ಭವಿದ್ರವ್ಯಂಗಳನೊಲ್ಲದೆ, ಶಿವನನರಿವರಲ್ಲಿ, ಶಿವನ ಪೂಜೆಯ ಮಾಡುವರಲ್ಲಿ, ಶಿವಮೂರ್ತಿಧ್ಯಾನದಿಂದ ಶಿವಲಿಂಗಾರ್ಚನೆಯ ಮಾಡುವರಲ್ಲಿ, ಶಿವಪ್ರಸಾದವ ಕಾಡಿ ಬೇಡಿ ತಂದು ಒಡೆಯನಿಗಿತ್ತು ಆ ಪ್ರಸಾದವ ಏಲೇಶ್ವರಲಿಂಗಕ್ಕೆ ಕೊಟ್ಟ ಆ ವ್ರತಭಾವಿಗೆ ನಮೋ ನಮೋ ಎನುತಿದ್ದೆ.
--------------
ಏಲೇಶ್ವರ ಕೇತಯ್ಯ