ಅಥವಾ
(8) (2) (1) (0) (1) (0) (0) (0) (1) (0) (0) (3) (1) (0) ಅಂ (5) ಅಃ (5) (4) (0) (2) (0) (0) (1) (0) (3) (0) (0) (0) (0) (0) (0) (0) (8) (0) (2) (1) (2) (1) (0) (3) (4) (5) (0) (0) (0) (1) (5) (2) (0) (10) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಮಲವ ಕಳೆವಲ್ಲಿ, ಜಲವ ಬಿಡುವಲ್ಲಿ, ರುಜೆರೋಗಂಗಳು ಬಿಡುವಲ್ಲಿ, ಸಕಲಸುಖಭೋಗಂಗಳ ಹಿಡಿವಲ್ಲಿ, ಅಧಮ ವಿಶೇಷವೆಂಬ ಭಾವಂಗಳು ಅಂಗವ ಮುಟ್ಟುವಲ್ಲಿ, ಅಂಗಕ್ಕೆ ಕಟ್ಟು, ಆತ್ಮಂಗೆ ವ್ರತ, ಏಲೇಶ್ವರಲಿಂಗದ ಕೂಟ ತಪ್ಪದಿರಬೇಕು.
--------------
ಏಲೇಶ್ವರ ಕೇತಯ್ಯ
ಮೃತ್ತಿಕೆಯ ಲವಣ ಸ್ವಯಂಪಾಕ, ಮಿಕ್ಕಾದ ಲವಣ ಅಪ್ಪುಭೇದ. ಸಪ್ಪೆಯ ವ್ರತ ನಿಶ್ಚಿಂತ, ಅದು ದೋಷನಾಶನ, ಇಂತೀ ಉಭಯ ವ್ರತವೆ ಕಟ್ಟು. ಮಿಕ್ಕಾದ ಅರುವತ್ತೆರಡು ಶೀಲ ಸ್ವತಂತ್ರಸಂಬಂಧ, ಅವು ಎಂಭತ್ತನಾಲ್ಕು ಲಕ್ಷ ಜೀವವ್ರತದ ಸಂಬಂಧ. ವ್ರತವ ಹಿಡಿದಲ್ಲಿ, ಆ ವ್ರತಕ್ಕೆ ಅನುಸರಣೆ ಬಂದಲ್ಲಿ, ಬಂದಿತು ಬಾರದೆಂಬ ಸಂದೇಹಕ್ಕೆ ಮುನ್ನವೆ ಆತ್ಮ ನಿರಂಗವಾಗಬಲ್ಲುದೊಂದೆ ವ್ರತ. ಮತ್ತೆ ಮಿಕ್ಕಾದವೆಲ್ಲವೂ ಸಂದಣಿಯ ತಗಹು, ಪರಿಸ್ಪಂದದ ಕೊಳಕು, ಲಂದಣಿಗರ ಬಂಧದ ಮಾತಿನ ಮಾಲೆ. ಇಂತೀ ಸಂಗ ದುಸ್ಸಂಗವನರಿತು ಹಿಂಗುವದ ಹಿಂಗಿ, ತನ್ನ ಸಂಗಸುಖಕ್ಕೆ ಬಂದುದ ಕೂಡಿಕೊಂಡು, ವ್ರತಭಂಗಿತನಲ್ಲದೆ ನಿರುತ ಸ್ವಸಂಗಿಯಾದ ಸರ್ವಾಂಗಸಂಬಂಧ ಶೀಲವಂತಂಗೆ, ಬೇರೊಂದುವಿಲ್ಲ, ಏಲೇಶ್ವರಲಿಂಗವು ತಾನೆ.
--------------
ಏಲೇಶ್ವರ ಕೇತಯ್ಯ
ಮನಕ್ಕೆ ವ್ರತವ ಮಾಡಿ, ತನುವಿಗೆ ಕ್ರೀಯ ಮಾಡಬೇಕು. ಇಂದ್ರಿಯಂಗಳಿಗೆ ಕಟ್ಟನಿಕ್ಕಿ, ಆತ್ಮನ ಸಂದೇಹವ ಬಿಡಿಸಿ ಕ್ರೀಯ ಮಾಡಬೇಕು. ಹೀಂಗಲ್ಲದೆ ವ್ರತಾಚಾರಿಯಲ್ಲ. ಮನಕ್ಕೆ ಬಂದಂತೆ ಹರಿದು, ಬಾಯಿಗೆ ಬಂದಂತೆ ನುಡಿದು, ಇಂತೀ ನಾ ವ್ರತಿಯೆಂದರೆ ಮೂಗನರಿಯದೆ ಮಾಣ ಏಲೇಶ್ವರಲಿಂಗನು.
--------------
ಏಲೇಶ್ವರ ಕೇತಯ್ಯ
ಮಾಡುವ ಧರ್ಮಕ್ಕೆ ಅಸುರದ ಕರ್ಮವೇತಕ್ಕೆ? ಭಕ್ತಿಯ ಮಾಡಿ ಸತ್ಯವನಾಚರಿಸಿಹೆನೆಂಬಲ್ಲಿ ತಾ ಮಾಡುವ ದ್ರವ್ಯಕ್ಕೆ ಆದರಣೆಯಿಂದ ಆದರಿಸಬೇಕು, ಏಲೇಶ್ವರಲಿಂಗವನರಿವುದಕ್ಕೆ.
--------------
ಏಲೇಶ್ವರ ಕೇತಯ್ಯ
ಮನಕ್ಕೆ ಬಂದಂತೆ ನೇಮವ ಮಾಡಲಿಲ್ಲ, ಆರಾರ ಅನುವ ಕಂಡು ಆ ನೇಮವನನುಕರಿಸಲಿಲ್ಲ. ತಾನಾಚರಿಸುವ ಸತ್ವ, ತಾ ಹಿಡಿದ ವ್ರತನೇಮದ ನಿಸ್ಚಯ. ಇಷ್ಟನರಿಯದೆ ದೃಷ್ಟವ ಕಂಡು ಘಟ್ಟಿಯ ತನದಲ್ಲಿ ಹೋರುವ ಮಿಟ್ಟೆಯ ಭಂಡರನೊಪ್ಪ ಏಲೇಶ್ವರಲಿಂಗವು.
--------------
ಏಲೇಶ್ವರ ಕೇತಯ್ಯ