ಅಪ್ಪುವಿನ ಶಿಲೆಯ ಉಳಿಯ ಮೊನೆಯಲ್ಲಿ ಚಿತ್ರಿಸಬಹುದೇ?
ಅರಗಿನ ಘಟವ ಉರಿಯ ಮೊನೆಯಲ್ಲಿ ಅಕ್ಷರವ ಬರೆಯಬಹುದೆ?
ಮೃತ್ತಿಕೆಯ ಹರುಗೋಲನೇರಿ ನದಿಯ ತಪ್ಪಲಿಗೆ ಹೋಗಬಹುದೆ?
ನಿಜನಿಶ್ಚಯವನರಿಯದವನ ವಾಚಾರಚನೆ ಇಷ್ಟಲ್ಲದಿಲ್ಲ.
ನಿಜತತ್ತ್ವವನರಿದವನ ವಾಚಾರಚನೆಯ ಕುರುಹೆಂತುಟೆಂದಡೆ:
ಶಿಲೆಯೊಳಗಣ ಸುರಭಿಯಂತೆ
ಪ್ರಳಯದೊಳಗಾದ ನಿಜನಿವಾಸದಂತೆ
ಆಯದ ಘಾಯದಂತೆ, ಸುಘಾಯದ ಸುಖದಂತೆ
ಇಂತೀ ಭಾವರಹಿತವಾದ ಭಾವಜ್ಞನ ತೇರ ಕೂಗಿಂಗೆ ಹೊರಗು
ಮಹಾಮಹಿಮ ಮಾರೇಶ್ವರಾ