ನಾರಿಯೂ ಮರನೂ ಕೂಡಿ ಬಾಗಲಿಕ್ಕಾಗಿ
ಶರ ಚರಿಸುವುದಕ್ಕೆಡೆಯಾಯಿತ್ತು.
ಭಕ್ತಿಯೂ ವಿರಕ್ತಿಯೂ ಕೂಡಲಿಕ್ಕಾಗಿ
ವಸ್ತುವನರಿವುದಕ್ಕೆ ಒಡಲಾಯಿತ್ತು.
ಆ ವಸ್ತು ತ್ರಿಕರಣವ ವೇದಿಸಿದ ಮತ್ತೆ ತ್ರಿಗುಣ ನಷ್ಟ.
ಆ ನಷ್ಟದಲ್ಲಿ ಪಂಚೇಂದ್ರಿಯ ನಾಶನ,
ಸಪ್ತಧಾತು ವಿಸರ್ಜನ, ಅಷ್ಟಮದ ಹುಟ್ಟುಗೆಟ್ಟಿತ್ತು,
ಹದಿನಾರು ತೊಟ್ಟುಬಿಟ್ಟಿತ್ತು, ಇಪ್ಪತ್ತೈದರ ಬಟ್ಟೆ ಕೆಟ್ಟಿತ್ತು,
ಸದ್ಭಾವದ ನಿಷ್ಠೆ ನಷ್ಟವಾಯಿತ್ತು.
ಇಂತಿವರೊಳಗಾದ ಕುಲವಾಸನೆ ಹೊಲಬುಗೆಟ್ಟಿತ್ತು.
ನಾನಾರೆಂಬುದ ತಿಳಿದಲ್ಲಿ
ಕೂಗಿನ ಕುಲಕ್ಕೆ ಹೊರಗಾಯಿತ್ತು
ಮಹಾಮಹಿಮ ಮಾರೇಶ್ವರನನರಿಯಲಾಗಿ.