ಊರೆಲ್ಲರೂ ಕೂಡಿಕೊಂಡು ತಿಂದರು ದನವ.
ಆ ಖಂಡವನೊಲ್ಲದೆ ಕಾಲ ಕೊಳಗು
ತಲೆಯ ಕೊಂಬು ಬೇಯಿಸಿ ತಿಂಬ ಶರಣ.
ತಿಂಬ ಕೊಂಬು ಕೊಳಗು ಅವನಂಗವ ನುಂಗಿತ್ತು.
ಅಂಗ ಸುಸಂಗ ಲೀಯವಾಯಿತ್ತು.
ಲೀಯ ನಿಜದಲ್ಲಿ ನಿಂದು ನಿರ್ಲೇಪವಾಯಿತ್ತು.
ಆ ಗುಣವೇತರಿಂದ ಆಯಿತ್ತು ಎಂಬುದನರಿ ನಿನ್ನ ನೀ,
ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.