ದಿನಚರಿಯೆಂಬ ಪಟ್ಟಣದಲ್ಲಿ ಕನಕರತಿಯೆಂಬರಸು,
ಮನಸಿಜನೆಂಬ ಪ್ರಧಾನ,
ಕನಸಕಂಡಡೆ ಅರಿವ ತಮಸೂನು ತಳವಾರ.
ಇವರೆಲ್ಲರ ವಂಚಿಸಿ ಅರಸಿನ ಹೆಂಡತಿ
ಹೆಂಡವ ಕುಡಿವವನ ಅಂಗದಲ್ಲಿ ಸಿಕ್ಕಿದಳು.
ಪ್ರಧಾನ ಕಂಡ; ಅರಸು ತಳವಾರ ಕಂಡುದಿಲ್ಲ.
ಮನಸಿಜ ಕಂಡು ಬದುಕಿದೆ ಹೋಗೆಂದ.
ಅರಸಿಗೆ ಕೂಪನಾದ; ಮಾನಹಾನಿಗೆ ಕೇಡಿಲ್ಲದಂತೆ.
ಇಂತೀ ಭೇದವನರಿ, ಪಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.