ಅಥವಾ
(6) (7) (3) (0) (1) (2) (0) (0) (2) (0) (0) (2) (1) (0) ಅಂ (2) ಅಃ (2) (11) (0) (1) (0) (0) (1) (0) (4) (0) (0) (0) (0) (0) (0) (0) (5) (0) (2) (3) (2) (5) (0) (7) (3) (13) (0) (1) (0) (2) (3) (1) (0) (11) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಬಾಹ್ಯದ ನೀತಿ ಅಂತರಂಗದ ಅರಿವು ಸರ್ವರಲ್ಲಿ ಕ್ಷಮೆ ಒಳಹೊರಗಾಗುವ ವರ್ತಕ ತ್ರಿವಿಧ ಶುದ್ಧವಾಗಿಯಿಪ್ಪ ಭಕ್ತನ ಜಂಗಮದ ಹೃತ್ಕಮಲವೆ ವಿರಕ್ತವಾಸ. ಇಷ್ಟನರಿದು ಮರೆದವಂಗಲ್ಲದೆ ತೆರಪಿಲ್ಲ; ನಿನ್ನ ನೀನರಿ ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಬಾಳೆ ಬಲಿದು ಈಳೆಯ ಮರನಾಯಿತ್ತು. ಆ ಈಳೆಯ ಮರನ ಏರಿ ಈರೇಳು ಲೋಕವ ಕಂಡವನ ಕಂಗಳ ಮಧ್ಯದಲ್ಲಿ ನಿಂದವನ ಆರೆಂದರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಬಿತ್ತಿದ ಬೆಳೆ, ಕಟ್ಟಿದ ಕರೆ, ಸಲಹಿದ ಶರೀರ, ನೆಟ್ಟ ವೃಕ್ಷ ತನಗಲ್ಲದೆ ಅವಕ್ಕೊಡಲುಂಟೆ? ತಾ ಮಾಡುವ ಭಕ್ತಿ ತನಗಲ್ಲದೆ ಬೇರೊಂದು ಗುಣವನರಸಲಿಲ್ಲ. ಆ ಪರಿಯ ನಿನ್ನ ನೀ ತಿಳಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಬಿತ್ತು ಅಂಕುರವ ನುಂಗಿಪ್ಪಾಗ ಅಂಕುರ ಆ ಬಿತ್ತ ತನ್ನಯ ಸಂಕೇತದಲ್ಲಿ ಇರಿಸಿಕೊಂಡು ಇಹಾಗೆ ಉಭಯದ ಭೇದ ಎಲ್ಲಿ ಅಡಗಿತ್ತು ಹೇಳಿರಣ್ಣಾ. ಅರುಹಿಸಿಕೊಂಬ ಕುರುಹು; ಆ ಅರುಹಿನಲ್ಲಿ ಕುರುಹಿನ ಕಳೆ ನಿಂದ ತೆರಪಾವುದು? ಅರುಹಿಸಿಕೊಂಬ ಅರಿವು ತೋರಿಸಿಕೊಂಬ ಕುರುಹಿನ ಕಳೆ ಬೇರೊಂದೆಡೆ ತೆರಪಿಲ್ಲ, ಅದು ತಾನೆ ನಿಶ್ಚಯ; ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಬಿಸಿಲ ಮುಂದಣ ಮಂಜಿನಂತಾಯಿತ್ತು. ದಿಟದ ಮುಂದಣ ಸಟೆಯಂತಾಯಿತ್ತು. ಪುಣ್ಯದ ಮುಂದಣ ಪಾಪದಂತಾಯಿತ್ತು. ಯೋಗಿಯ ಮುಂದಣ ಸಂಸಾರದಂತಾಯಿತ್ತು. ಧೀರನ ಮುಂದಣ ಹೇಡಿಯಂತಾಯಿತ್ತು. ಉರಗನ ಮುಂದಣ ಭೇಕನಂತಾಯಿತ್ತು. ಹರಿಯ ಮುಂದಣ ಕರಿಯಂತಾಯಿತ್ತು. ವಿವೇಕದ ಮುಂದಣ ದುಃಖದಂತಾಯಿತ್ತು. ಪುಣ್ಯಾರಣ್ಯದಹನ ಭೀಮೇಶ್ವರನೆಂಬ ಸದ್ಗುರು ಕಾರುಣ್ಯವಾಗಲೊಡನೆ ಎನ್ನ ಸುತ್ತಿಹ ಪ್ರಪಂಚು ಸರ್ವವೂ ಓಡಿದವಯ್ಯಾ!
--------------
ಕೋಲ ಶಾಂತಯ್ಯ
ಬೇವಿನ ಮರದಲ್ಲಿ ಕಾಗೆ ಮನೆಯ ಮಾಡಿತ್ತು. ಕೋಗಿಲೆ ಮರಿಯ ಹಾಕಿತ್ತು. ಗೂಗೆ ಆರೈಕೆಯ ಮಾಡಿ ಸಾಕಿತ್ತು. ಹಂಸೆ ತಂಬೆಲರ ಕುಟುಕ ಕೊಟ್ಟು ಸಂಭ್ರಮವ ಮಾಡಿತ್ತು. ಅದು ಆರ ಹಂಗಿಲ್ಲದೆ ಹಾರಿ ಹೋಗುತ್ತ ಎನಗೆ ಬೇವಿನ ಮರನೆ ತಾಯಿಯೆಂದಿತ್ತು ಹಾಗೆಂದುದ ನಿನ್ನ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಬ್ರಹ್ಮನ ಬಾಯ ಓಗರವನುಂಡು, ವಿಷ್ಣುವಿನ ಕೈಯ ಸೀರೆಯ ಹೊದ್ದು, ರುದ್ರನ ಮನೆಯಲ್ಲಿ ತಿರುಗಾಡುತ್ತಿಪ್ಪ ಭದ್ರಾಂಗಿಗಳು ಕೇಳಿರೋ. ಬ್ರಹ್ಮನ ಬಾಯ ಮುಚ್ಚಿ, ವಿಷ್ಣುವಿನ ಕೈಯ ಮುರಿದು, ರುದ್ರನ ಮನೆಯ ಸುಟ್ಟು ಬುದ್ಧಿವಂತರಾಗಿ. ಬುದ್ಧಿವಂತರಾದವರ ಅರಿದವರನರಿ. ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ