ಬಿತ್ತಿದ ಬೆಳೆ, ಕಟ್ಟಿದ ಕರೆ, ಸಲಹಿದ ಶರೀರ, ನೆಟ್ಟ ವೃಕ್ಷ ತನಗಲ್ಲದೆ ಅವಕ್ಕೊಡಲುಂಟೆ? ತಾ ಮಾಡುವ ಭಕ್ತಿ ತನಗಲ್ಲದೆ ಬೇರೊಂದು ಗುಣವನರಸಲಿಲ್ಲ. ಆ ಪರಿಯ ನಿನ್ನ ನೀ ತಿಳಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
ಬೇವಿನ ಮರದಲ್ಲಿ ಕಾಗೆ ಮನೆಯ ಮಾಡಿತ್ತು. ಕೋಗಿಲೆ ಮರಿಯ ಹಾಕಿತ್ತು. ಗೂಗೆ ಆರೈಕೆಯ ಮಾಡಿ ಸಾಕಿತ್ತು. ಹಂಸೆ ತಂಬೆಲರ ಕುಟುಕ ಕೊಟ್ಟು ಸಂಭ್ರಮವ ಮಾಡಿತ್ತು. ಅದು ಆರ ಹಂಗಿಲ್ಲದೆ ಹಾರಿ ಹೋಗುತ್ತ ಎನಗೆ ಬೇವಿನ ಮರನೆ ತಾಯಿಯೆಂದಿತ್ತು ಹಾಗೆಂದುದ ನಿನ್ನ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.