ಆವ ಬಗೆ ಭಾವ ಬಲ್ಲತನ ಅಳವಟ್ಟಲ್ಲಿ ರಾಗವಿರಾಗವೆಂಬುದಿಲ್ಲ.
ಸುಖ ಸುಮ್ಮಾನ ರುಜೆ ರೋಗ ತಾಗು ನಿರೋಧ ಬಂದಲ್ಲಿ
ಶೋಕ ಮೋಹಾದಿಗಳು ವರ್ತಿಸಿದಲ್ಲಿ
ಜ್ಯೋತಿಯ ಬುಡದಂತೆ;
ರಜ್ಜು ತೈಲ ಅಗ್ನಿ ಉಳ್ಳನ್ನಕ್ಕ
ಉರಿದು ಆ ಬುಡ ಹೊದ್ದದಂತೆ.
ಈ ಸಂಸಾರದ ಬುಡದಲ್ಲಿ
ನಾನಾ ವಿಕಾರತ್ರಯದ ಗುಣದಲ್ಲಿ
ನೀರಿನೊಳಗಿರ್ದು ಈಸುವನಂತೆ
ಬಂಧ ಮೋಕ್ಷ ಕರ್ಮಂಗಳಲ್ಲಿ ದ್ವಂದ್ವಿತನಲ್ಲದೆ,
ನಿಂದ ನಿಜೈಕ್ಯಂಗೆ ಹಿಂದು ಮುಂದೆಂಬ ಬಂಧವಿಲ್ಲ.
ಗೋರಕ್ಷಪಾಲಕ ಮಹಾಪ್ರಭು ಸಿದ್ಧಸೋಮನಾಥ-ಲಿಂಗವಾದವಂಗೆ.