ಮನ ಬುದ್ಧಿ ಚಿತ್ತ ಅಹಂಕಾರವೆಂಬ
ನಾಲ್ಕು ಲೋಹದಿಂದ ಸರ್ವೇಂದ್ರಿಯದ ಮೊತ್ತ.
ಮನ ವಸ್ತುವ ಮುಟ್ಟದೆ, ನಿಜನಿಷೆ*ಯನರಿಯದೆ,
ಬಹುಮೊತ್ತದ ಮಾತಲ್ಲದ ಮಾತನಾಡುವದು,
ಕಳ್ಳವಣ, ಸಲ್ಲದ ತಾರ ಇವೆಲ್ಲವ ತಿಳಿದು
ಕಂಬಳಿಯ ಚೀಲದವನ ಬೆಂಬಳಿಯಲ್ಲಿ ಬನ್ನಿ.
ನಿಮಗಲ್ಲದ ಒಡವೆಯನೊಳ್ಳಿತ್ತು ಮಾಡಿಕೊಡುವೆ,
ಊಧ್ರ್ವರೇತೋಮೂರ್ತಿ ಶ್ವೇತ ಸ್ವಯಂಭು
ಕಪಿಲೇಶ್ವರಲಿಂಗ ಸಾಕ್ಷಿಯಾಗಿ.