ಲೋಕವ ಕುರಿತಲ್ಲಿ ಆಚಾರದ ಮಾತು.
ತನ್ನ ಕುರಿತಲ್ಲಿ ಅನಾಚಾರದ ಮಾತು.
ಆಚಾರಸಂಪನ್ನರನ್ನೆಲ್ಲಿಯೂ ಕಂಡೆ.
ಅನಾಚಾರಸಂಪನ್ನರನ್ನೆಲ್ಲಿಯೂ ಕಾಣೆ.
ಭಕ್ತ ಭವಿಯಾಗಬಹುದಲ್ಲದೆ, ಭವಿ ಭಕ್ತನಾಗಬಾರದು.
ಬೆಣ್ಣೆಗೆ ತುಪ್ಪವಲ್ಲದೆ ತುಪ್ಪ ಬೆಣ್ಣೆಯಪ್ಪುದೆ?
ತರು ಬೆಂದಲ್ಲಿ ಕರಿಯಲ್ಲದೆ, ಕರಿ ಬೆಂದಲ್ಲಿ ತರು ಉಂಟೆ?
ಇದು ಅಘಟಿತ, ಅನಾಮಯ,
ನಾರಾಯಣಪ್ರಿಯ ರಾಮನಾಥಾ.