ಭಕ್ತನಂತೆ ತ್ರಿವಿಧ ಮಲಕ್ಕಿಕ್ಕುವನೆ ಚಿತ್ತವ ?
ವಿರಕ್ತನಂತೆ ಸರ್ವವ್ಯಾಪಾರಕ್ಕೆ ಮೊತ್ತದ ಇಂದ್ರಿಯ ವರ್ಗದಲ್ಲಿ ,
ಸುಚಿತ್ತವ ಬಿಟ್ಟು ಮತ್ತೆ ವಿರಕ್ತನಪ್ಪನೆ ?
ಈ ಉಭಯದ ಭಾವವ ನಿಶ್ಚೆ ೈಸಿದಲ್ಲಿ ,
ಕುಸುಮ ಗಂಧದಂತೆ, ಮುಕುರ ಬಿಂಬದಂತೆ,
ಉರಿ ಕಪುರದಿರವಿನ ತೆರದಂತೆ,
ನಿಃಕಳಂಕ ಕೂಡಲಚೆನ್ನ ಸಂಗಮದೇವ ತಾನಾದ ಶರಣ.