ಮರದ ದೇವರಿಗೆ ಉರಿಯ ಪೂಜೆಯುಂಟೆ ?
ಮಣ್ಣಿನ ಹರುಗುಲದಲ್ಲಿ ತುಂಬಿದ ತೊರೆಯ ಹಾಯಬಹುದೆ ?
ತೆರಕಾರನ ನಚ್ಚಿ ಕಳನೇರಬಹುದೆ ?
ಇಂತೀ ಗುಣದ ದೃಷ್ಟವ ಕಡೆಗಾಣಿಸಿದಲ್ಲಿ,
ಪ್ರಮಾಣಿಸಿದಲ್ಲಿಯೂ ಏತರನು,
ಹಾಂಗೆ ಬರಿಹುಂಡರ, ಆಚಾರಭ್ರಷ್ಟರ, ಅರ್ತಿಕಾರರ,
ಚಚ್ಚಗೋಷಿ*ವಂತರ, ಬಹುಯಾಚಕರ,
ಪಗುಡೆ ಪರಿಹಾಸಕರ, ತ್ರಿವಿಧದಲ್ಲಿ ಸೂತವನರಸುವ
ವಿಶ್ವಾಸಘಾತಕರ, ಅಪ್ರಮಾಣ ಪಾತಕರ,
ಭಕ್ಕಿಯ ತೊಟ್ಟಲ್ಲಿ ಭಕ್ತನೆಂದಡೆ,
ವಿರಕ್ತಿಯ ತೊಟ್ಟಲ್ಲಿ ಕರ್ತುವೆಂದಡೆ, ದೀಕ್ಷೆಯ ಮಾಡಿದಲ್ಲಿ ಗುರುವೆಂದಡೆ,
ತಪ್ಪ ಕಂಡಲ್ಲಿ ಎತ್ತಿ ತೋರುವೆನು.
ಗುಟ್ಟಿನಲ್ಲಿ ಚಿತ್ತ ಬಿಡಲಾರದಿರ್ದಡೆ,
ನಿಃಕಳಂಕ ಕೂಡಲಚೆನ್ನ ಸಂಗಮದೇವರಾದಡೂ ಎತ್ತಿಹಾಕುವೆನು.