ಹೊರಗಣ ಸಿಪ್ಪೆ ಒಳಗೆ ಮೆಲುವನ್ನಕ್ಕ ಉಭಯದ ಕೂಟ.
ಅಗಲಿಗೆ ಬಂದ ಮತ್ತೆ ರಸಾನ್ನವಲ್ಲದೆ ಹಿಪ್ಪೆಗೆ ಚಿತ್ತ ಒಪ್ಪಬಲ್ಲುದೆ ?
ಅರಿವನ್ನಬರ ಸ್ಥಲಕುಳಂಗಳ ಹೊಲಹೊಲದ ಹೊಲಬ ತಿಳಿದಲ್ಲಿ ,
ಭಕ್ತಿಜ್ಞಾನವೈರಾಗ್ಯಗಳೆಂಬ ತ್ರಿವಿಧದ ಗೊತ್ತು ನಷ್ಟವಾದ ಶರಣ,
ತಥ್ಯಮಿಥ್ಯಕ್ಕೆ ಸಿಕ್ಕ ಮತ್ತಾವ ಗುಣಂಗಳಲ್ಲಿಯೂ ಹೊರದೃಷ್ಟಕ್ಕೆ ಬಾರ.
ಆತ ನಿಶ್ಚಿಂತ ನೋಡಾ, ನಿಃಕಳಂಕ ಕೂಡಲಚೆನ್ನಸಂಗಮದೇವ
ತಾನಾದ ಶರಣ.