ಲಿಂಗಬಾಹ್ಯನ, ಆಚಾರಭ್ರಷ್ಟನ, ವ್ರತತಪ್ಪುಕನ,
ಗುರುಲಿಂಗಜಂಗಮವ ಕೊಂದವನ,
ಪಾದೋದಕ ಪ್ರಸಾದ ದೂಷಕನ,
ವಿಭೂತಿ ರುದ್ರಾಕ್ಷಿ ನಿಂದಕನ ಕಂಡಡೆ,
ಶಕ್ತಿಯುಳ್ಳಡೆ ಸಂಹಾರವ ಮಾಡುವುದು.
ಶಕ್ತಿಯಿಲ್ಲದಿದ್ದಡೆ ಕಣ್ಣು ಕರ್ಣವ ಮುಚ್ಚಿಕೊಂಡು
ಶಿವಮಂತ್ರ ಜಪಿಸುವುದು.
ಅಷ್ಟೂ ಆಗದಿದ್ದಡೆ, ಆ ಸ್ಥಳವ ಬಿಡುವುದು.
ಅದಲ್ಲದಿದ್ದಡೆ, ಕುಂಭೀಪಾತಕ ನಾಯಕನರಕದಲ್ಲಿಕ್ಕುವ
ಶ್ರೀಗುರುಸಿದ್ಧೇಶ್ವರನು.