ಅಥವಾ
(1) (0) (0) (1) (0) (0) (0) (0) (1) (0) (0) (0) (0) (0) ಅಂ (0) ಅಃ (0) (0) (0) (0) (0) (0) (0) (0) (1) (0) (0) (0) (0) (0) (0) (0) (2) (0) (2) (0) (0) (0) (0) (0) (0) (0) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ತನ್ನ ಸಮ ಕ್ರೀವಂತರಲ್ಲಿಯಲ್ಲದೆ ಕೊಳುಕೊಡೆ ಮಿಕ್ಕಾದ ಹೊರಗಣ ಕ್ರೀ ಸೋಂಕು ಬಾಹ್ಯರಚನೆ ತಪ್ಪದಿರಬೇಕು. ಆತ್ಮನರಿದು ಮುಟ್ಟುವಲ್ಲಿ ತನ್ನ ವ್ರತದೆಸಕವನರಿದು ಸ್ವಪ್ನಾವಸ್ಥೆಗಳಲ್ಲಿದ್ದು ಸೂಕ್ಷ ್ಮತನುವಂ ಮುಟ್ಟದೆ, ಅಲ್ಲದುದ ಕಂಡು ಮತ್ತೆ ಆರೂ ಅರಿಯರೆಂದು ತನ್ನಲ್ಲಿಯೇ ಅಡಗದೆ, ತಲೆದೋರಿದಲ್ಲಿಯೇ ಲಯವಾಗಬೇಕು. ಇಂತೀ ಗುಣ ಆತ್ಮನ ಶೀಲ ಮನಕ್ಕೆ ಮನೋಹರ ಶಂಕೇಶ್ವರ ಲಿಂಗದಲ್ಲಿ.
--------------
ಕರುಳ ಕೇತಯ್ಯ
ತನಗಲ್ಲದುದ ಘಟ ಸೋಂಕಿದಲ್ಲಿ ಅಲ್ಲಿಯೇ ಕಡಿವೆನು. ತನಗಲ್ಲದುದ ಕೈ ಮುಟ್ಟಿದಲ್ಲಿ ಅಲ್ಲಿಯೇ ತೆಗೆವೆನು. ತನಗಲ್ಲದುದ ಕಿವಿ ಕೇಳಿದಲ್ಲಿ ಅಲ್ಲಿಯೇ ಗುಂಟಿ ಬಲಿವೆನು. ತನಗಲ್ಲದುದ ನಾಸಿಕ ವಾಸಿಸಿದಲ್ಲಿ ಅಲ್ಲಿಯೇ ದಸಿಯ ದಕ್ಕನೇರಿಸುವೆನು. ದೃಷ್ಟಿ ಅನುತಪ್ಪಿ ನೋಡಿದಲ್ಲಿ ಅಲ್ಲಿಯೇ ಕಿತ್ತಿಡುವೆನು. ಚಿತ್ತ ಅನುತಪ್ಪಿ ಮತ್ತೊಂದ ನೆನೆದಡೆ, ಆತ್ಮನನಲ್ಲಿಯೆ ಕಿತ್ತು ಹಾಕುವೆನು. ಇದಕ್ಕೆ ನೀವೇ ಸಾಕ್ಷಿ, ಮನಕ್ಕೆ ಮನೋಹರ ಶಂಕೇಶ್ವರ ಲಿಂಗವು.
--------------
ಕರುಳ ಕೇತಯ್ಯ