ಅಥವಾ
(0) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (0) (0) (1) (0) (0) (1) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಗುರುಮುಖದಿಂದ ಬಂದುದೇ ಗುರುಪ್ರಸಾದ ಆ ಪ್ರಸಾದವನು ಲಿಂಗಕ್ಕೆ ಅರ್ಪಿಸಿದಲ್ಲಿ ಲಿಂಗಪ್ರಸಾದ. ಭೋಜ್ಯ ಕಟ್ಟಿ ಲಿಂಗಕ್ಕೆ ಕೊಟ್ಟು ಸಲಿಸುವುದೇ ಜಂಗಮಪ್ರಸಾದ. ತತ್ಪ್ರಸಾದಿಗಳಲ್ಲಿ ಯಾಚಿಸಿ, ಅವರ ಪ್ರಸಾದವ ಕೊಂಬುದೆ ಪ್ರಸಾದಿಯ ಪ್ರಸಾದ. ಅಪೇಕ್ಷೆಯಿಂದ ಸಲಿಸುವುದೇ ಆಪ್ಯಾಯನಪ್ರಸಾದ. ಗುರುಲಿಂಗಜಂಗಮವ ಕಂಡು, ಆ ಸಮಯದಲ್ಲಿ ತೆಗೆದು ಕೊಂಬುವುದೇ ಸಮಯಪ್ರಸಾದ. ಪಂಚೇಂದ್ರಿಯಂಗಳಲ್ಲಿ ಪಂಚವಿಷಯ ಪದಾರ್ಥಂಗಳನು ಪಂಚವಿಧಲಿಂಗಕ್ಕೆ ಸಮರ್ಪಣ ಮಾಡುವುದೇ ಪಂಚೇಂದ್ರಿಯವಿರಹಿತಪ್ರಸಾದ. ಮನವೇ ಲಿಂಗ, ಬುದ್ಭಿಯೇ ಶಿವಜ್ಞಾನ, ಚಿತ್ತವೇ ಶಿವದಾಸೋಹ, ಅಹಂಕಾರದಲ್ಲಿ ಶಿವಚಿಂತನೆಯುಳ್ಳವನಾಗಿ ಸಲಿಸಿದ್ದೇ ಅಂತಃಕರಣವಿರಹಿತಪ್ರಸಾದ. ತ್ರಿವಿಧಾಂಗದಲ್ಲಿ ತ್ರಿವಿಧಲಿಂಗವ ಸಂಬಂಧಿಸಿ ಆ ಚಿದ್ಘನಲಿಂಗ ತಾನೆಂದರಿದು, ಆ ತ್ರಿವಿಧಲಿಂಗಕ್ಕೆ ಕೊಡುವುದೇ ಸದ್ಭಾವಪ್ರಸಾದ. ಬಹಿರಂಗದ ಪ್ರಪಂಚವ ನಷ್ಟಮಾಡಿ, ಅರಿವುವಿಡಿದು ಸಲಿಸುವುದೇ ಸಮತಾಪ್ರಸಾದ. ಶ್ರೀಗುರುವಿನ ಪ್ರಸನ್ನತ್ವವೆ ಜ್ಞಾನಪ್ರಸಾದ. ಇಂತೀ ಏಕದಶ ಪ್ರಸಾದವನು ಒಳಹೊರಗೆ ಪರಿಪೂರ್ಣಮಾಗಿ ತಿಳಿಯುವುದೆ ಶಿವತಂತ್ರ, ಗುರುಶಾಂತೇಶ್ವರಾ.
--------------
ದಸರಯ್ಯಗಳ ಪುಣ್ಯಸ್ತ್ರೀ ವೀರಮ್ಮ