ಪಂಜ ಹಿಡಿವಂಗೆ ಸಂದೇಹವೆಲ್ಲಿದೆ
ಉರಿವ ಬೆಳಗಿಂಗೆ ಸಂದೇಹವುಂಟೆ?
ಸಂಸಾರ ಸಂದಣಿಯಲ್ಲಿ ಅನಂಗನ ಆತುರದಲ್ಲಿ
ಹೊಂದಿ ಬೇವಂಗೆ ಲಂದಣತನವಲ್ಲದೆ
ನಿಜಪ್ರಸಂಗಿಗೆ, ನಿರತಿಶಯ ಲಿಂಗಾಂಗಿಗೆ, ಪರಬ್ರಹ್ಮಪರಿಣಾಮಿಗೆ
ಜಗದ ಹರದಿಗರಲ್ಲಿ ಸಿಕ್ಕಿ ಪರಿಭ್ರಮಣಕ್ಕೊಳಗಾಹನೆ?
ಇಂತೀ ನಿಜವನರಿದಾತನೆ
ಚೆನ್ನಬಸವಣ್ಣ ಸಾಕ್ಷಿಯಾಗಿ
ಕಮಳೇಶ್ವರಲಿಂಗವು ತಾನೆಂಬೆನು.