ಭರಿತಾರ್ಪಣವೆಂದು ಲಿಂಗಕ್ಕೆ ಸಮರ್ಪಿಸಿದ ಮತ್ತೆ
ಪ್ರತಿಪ್ರಸಾದವೆಂದು ಕೊಂಬಲ್ಲಿ ಭರಿತಾರ್ಪಣವೆಂತುಟಾಯಿತ್ತು ?
ತನ್ನಯ ಘಟದ ಹೆಚ್ಚುಗೆಯೊ ?
ಅಲ್ಲಾ, ಭರಿತಾರ್ಪಣದ ವ್ರತದ ನಿಶ್ಚಯವೊ ?
ಕಟ್ಟಿನ ವ್ರತಕ್ಕೆ ಪುನರಪಿ ಕ್ರೀಯುಂಟೆ ?
ಸತ್ಯ ಜಾರಿದ ಮತ್ತೆ ಮುಕ್ತಿಯ ಪಥ ಅವಂಗುಂಟೆ ?
ಇಂತೀ ಕಂಡವರ ಕಂಡು, ಕೈಕೊಂಡು, ಅವರೊಂದಾಗಿ ಆಡಿ,
ಅವರ ಸಂಸರ್ಗದಿಂದವ ಕಲಿತು,
ಅವರು ಹಿಂಗಿದ ಮತ್ತೆ
ತಾನೆಂದಿನಂತಹ ಕ್ರಿಯಾಭಂಡನ ಭರಿತಾರ್ಪಣಲಂಡನ
ಮತ್ತಾವ ಕ್ರೀಯಲ್ಲಿಯೂ ತಪ್ಪಿ,
ಆ ತಪ್ಪಿಗೆ ವ್ರತವ ಹೆಚ್ಚಿಸಿಕೊಂಡಹೆನೆಂಬ
ದುರ್ಮತ್ತ ಸುರಾಪಾ[ನಿಯಿಂ]ದತ್ತ ಕಾಣದಿರ್ದಡೆ
ಭಕ್ತಿಗೆ ಸಲ್ಲ, ಮುಕ್ತಿಯವಂಗಿಲ್ಲ,
ಸದ್ಭಕ್ತರೊಳಗಲ್ಲ, ಮಿಕ್ಕಾದ ಕೃತ್ಯ ಅವಂಗಿಲ್ಲ, ಇದು ಸತ್ಯ,
ಭೋಗಬಂಕೇಶ್ವರಲಿಂಗ ಸಾಕ್ಷಿಯಾಗಿ.