ಸಕಲಪದಾರ್ಥದ್ರವ್ಯಂಗಳೆಲ್ಲವ ಲಿಂಗಕ್ಕೆ ಮುಟ್ಟಿಸಿ
ಪ್ರಸಾದ ಮುಂತಾಗಿ ತಾ ಮುಟ್ಟಿಹೆನೆಂಬಲ್ಲಿ ತನ್ನ ಸಂಕಲ್ಪದ ಗುಣವೊ?
ಘನಲಿಂಗಕ್ಕೆ ತೃಪ್ತಿಮಾಡಿ ಒಕ್ಕುದ ಕೊಂಡಿಹೆನೆಂಬ ಕಟ್ಟಳೆಯ ಗುಣವೊ ?
ಇಂತೀ ಸತ್ಕ್ರೀಮಾರ್ಗಂಗಳನರಿದು ಅರ್ಪಿಸುವಲ್ಲಿ
ಲಿಂಗಮುಂತಾಗಿ ತಾ ಕೊಂಬನಾಗಿ ಲಿಂಗಕ್ಕೆ ಮರೆದು ತಾ ಕೊಂಡಿಹೆನೆಂಬಲ್ಲಿ
ಲಿಂಗಕ್ಕೆ ತಾನೊಳಗೊ ಹೊರಗೊ - ಎಂಬುದ ತಿಳಿದು, ಸಂದುದ ಕೈಕೊಂಡು,
ಸಲ್ಲದೆ ಮರವೆಯಿಂದ ಬಂದುದ
ಚರಲಿಂಗದ ಮುಖದಿಂದ ಸಂದುದ ಕೈಕೊಂಬುದು
ಅಂಗಸೋಂಕು, ಆತ್ಮಸೋಂಕು, ಅರಿವುಸೋಂಕು,
ಈ ತ್ರಿವಿಧ ಸೋಂಕು ಪರಿಪೂರ್ಣವಾದುದು ಅರ್ಪಿತ, ಅವಧಾನಿಯ ಕಟ್ಟು.
ಹೀಂಗಲ್ಲದೆ ಮಿಕ್ಕಾದುದೆಲ್ಲವೂ ವಾಚಾಲಕರ ಕಟ್ಟುಕದ ಮಾತು.
ಆ ಮಾತಿನ ಮಾಲೆಯೆಲ್ಲವೂ ಭ್ರಷ್ಟ, ಭೋಗಬಂಕೇಶ್ವರಲಿಂಗದಲ್ಲಿ
ನಿಹಿತಾಚಾರಿಗಳ ಕಟ್ಟು.