ಚಂದ್ರಕಾಂತಶಿಲೆಯನೊಂದು ಹಿಳಿದಲ್ಲಿ, ಬಿಂದು ಬಂದುದುಂಟೆ ?
ಸುಗಂಧದ ನನೆಯ ತಂದು ಬಂಧಿಸಿದಲ್ಲಿ, ಆ ಸುವಾಸನೆ ಬಂದುದುಂಟೆ ?
ಆ ಕಿರಣ ಪರುಷಶಿಲೆ ಸತಿಯಾಗಿ ಬೆರಸಿದಲ್ಲಿ, ಬಿಂದು ರೂಪಾಯಿತ್ತು.
ರಿತುಕಾಲಕ್ಕೆ ಕುಸುಮ ಬಲಿಯಲಾಗಿ, ಸುವಾಸನೆಯೆಸಗಿತ್ತು.
ಇಂತೀ ಉಭಯದಿಂದ ಅರಿವಲ್ಲಿ, ಸ್ಥಲಸ್ಥಲವ ನೆಮ್ಮಿ ನಿಃಸ್ಥಲವನರಿತಲ್ಲಿ,
ದೃಷ್ಟದ ಇಷ್ಟ ಅಲ್ಲಿಯೇ ಲೇಪ, ನಿಃಕಳಂಕ ಮಲ್ಲಿಕಾರ್ಜುನಾ.