ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಸಹಸ್ರಶೀರ್ಷನಾದಿಪುರುಷನು. ವೇದಪುರುಷನೊಬ್ಬ ಪುರುಷನು. ತ್ರಿಪಾದ ಊಧ್ರ್ವನೊಬ್ಬ ಪುರುಷನು. ಉದನ್ಮುಖನೊಬ್ಬ ಪುರುಷನು. ಉದಯಪುರುಷನೊಬ್ಬ ಪುರುಷನು. ವಿರಾಟ್ಪುರುಷನೊಬ್ಬ ಪುರುಷನು. ಆದಿಪುರುಷನೊಬ್ಬ ಪುರುಷನು. ವಿಯತ್ಪುರುಷನೊಬ್ಬ ಪುರುಷನು. ತದ್ವಿಯತ್ಪುರುಷ ಪುರುಷರಿಲ್ಲದ ಪ್ರಭೆ ನೋಡಿದರೆ, ವೇದನಾದಾತೀತ ತೂರ್ಯಪರಮಾನಂದ ನಿರವಯ ಷಟ್‍ತ್ರಿಂಶತ್‍ಪ್ರಭಾಪಟಲಪ್ರಭೆಯ ಬೆಳಗಿದೆ ನೋಡಿರೆ. ಬೆಳಗಿನೊಳಗಣ ಮಹಾಬೆಳಗಿನ ಬೆಳಗು ಕೂಡಲಸಂಗಯ್ಯ.
--------------
ಬಸವಣ್ಣ
ಸಮಯೋಚಿತದಲ್ಲಿ ಲಿಂಗಾರ್ಚನೆಯ ಮಾಡುತಿಪ್ಪನಾ ಭಕ್ತನು. ಮಾಡಿದಡೆ ಮಾಡಲಿ, ಮಾಡಿದಡೆ ತಪ್ಪೇನು ಆ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದುಡುಕಿದಡೆ ಅದು ಪ್ರಸಾದವಲ್ಲ, ಕಿಲ್ಬಿಷ. ಆ ಸಮಯೋಚಿತದಲ್ಲಿ ಬಂದ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದೆಗೆದಡೆ, ಅದು ಲಿಂಗಕ್ಕೆ ಬೋನ. ಇದು ಕಾರಣ, ಕೂಡಲಸಂಗಮದೇವಾ, ಇಂತಪ್ಪ ಸದಾಚಾರಿಗಳನೆನಗೆ ತೋರಾ 400
--------------
ಬಸವಣ್ಣ
ಸಿರಿಯಾಳನ ಮಗನ ಬಾಣಸವ ಮಾಡಿಸಿ ಉಣಲೊಲ್ಲದೆ, ಕಾಡಿದೆ. ಚೋಳನ ಮನೆಯಲು ಉಣಲೊಲ್ಲದೆ, ಚೆನ್ನನ ಮನೆಯಲುಂಡೆ. ಒಬ್ಬರಿಗೊಂದು ಪರಿಯ ಮಾಡಿದೆ, ಕೂಡಲಸಂಗಮದೇವಾ.
--------------
ಬಸವಣ್ಣ
ಸೂರ್ಯನ ಉದಯ ತಾವರೆಗೆ ಜೀವಾಳ, ಚಂದ್ರಮನುದಯ ನೆ್ದುಲೆಗೆ ಜೀವಾಳ. ಕೂಪರಠಾವಿನಲ್ಲಿ ಕೂಟ ಜೀವಾಳವಯ್ಯಾ, ಒಲಿದ ರಾವಿನಲ್ಲಿ ನೋಟ ಜೀವಾಳವಯ್ಯಾ. ಕೂಡಲಸಂಗನ ಶರಣರ ಬರವೆನಗೆ ಪ್ರಾಣ ಜೀವಾಳವಯ್ಯಾ. 367
--------------
ಬಸವಣ್ಣ
ಸಗಣಿಯ ಬೆನಕಂಗೆ ಸಂಪಗೆಯರಳಲ್ಲಿ ಪೂಜಿಸಿದಡೆ ರಂಜನೆಯಹುದಲ್ಲದೆ ಅದರ ಗಂಜಳ ಬಿಡದಣ್ಣಾ, ಮಣ್ಣ ಪುತ್ಥಳಿಯ ಮಾಣದೆ ಜಲದಲ್ಲಿ ತೊಳೆದಡೆ ನಿಚ್ಚ ಕೆಸರಹುದಲ್ಲದೆ ಅದರಚ್ಚಿಗ ಬಿಡದಣ್ಣಾ. ಲೋಕದ ಮಾನವಂಗೆ ಶಿವದೀಕ್ಷೆಯ ಕೊಟ್ಟಡೆ ಕೆಟ್ಟವನೇಕೆ ಸದ್ಭಕ್ತನಹನು ಕೂಡಲಸಂಗಮದೇವಾ 93
--------------
ಬಸವಣ್ಣ
ಸಿಂಗದ ನಡು ಮುರಿಯಲಾ ಸಿಂಗವೇನು ಬಾತೆ ಸುಂಡಿಲು ಮುರಿಯಲು ಗಜವೇನು ಬಾತೆ ಸಂಗ್ರಾಮದಲ್ಲಿ ವೀರನುಳಿಯಲದೇನು ಬಾತೆ ಶೃಂಗಾರದ ಮೂಗು ಹೋದಡೆ ಶೃಂಗಾರವೇನು ಬಾತೆ ನಿಜ ತುಂಬಿದ ಭಕ್ತಿ ತುಳುಕಾಡದವರ ಸಂಗವೇನು ಬಾತೆ ಕೂಡಲಸಂಗಮದೇವಾ.
--------------
ಬಸವಣ್ಣ
ಸಾಕಾರ ಸಂಗನಲ್ಲಿ ನಿರಾಕಾರವಿಲ್ಲೆಂದು ನಿರಾಕರ ಸಂಗವನರಸಿ ತೊಳಲಿ ಬಳಲಿದೆನಯ್ಯಾ. ನಿಶ್ಚಿಂತ ನಿಜಭಜನೆ ನೆಲೆಗೊಳ್ಳದೆನಗೆ, ಭ್ರಾಂತು ಭ್ರಮೆಯಿಲ್ಲದಂತೆ ಎಂದಪ್ಪುದೋ ಎನಗೆ ಕೂಡಲಸಂಗಮದೇವಾ, ಕೇಳಯ್ಯಾ.
--------------
ಬಸವಣ್ಣ
ಸಮಚಿತ್ತವೆಂಬ ನೇಮದ ಹಲಗೆಯ ಹಿಡಿದು, ಶಿವಚಿತ್ತವೆಂಬ ಕೂರಲಗ ಕೊಂಡು, ಶರಣಾರ್ಥಿಯೆಂಬ ಶ್ರವಗಲಿತಡೆ, ಆಳುತನಕ್ಕೆ ದೆಸೆಯಪ್ಪೆ ನೋಡಾ. ಮಾರಂಕ ಜಂಗಮ ಮನೆಗೆ ಬಂದಲ್ಲಿ ಇದಿರೆತ್ತಿ ನಡೆವುದು, ಕೂಡಲಸಂಗಮದೇವನನೊಲಿಸುವಡಿದು ಚಿಹ್ನ !
--------------
ಬಸವಣ್ಣ
ಸಕಲದಲ್ಲಿ ಸನ್ನಿಹಿತರಲ್ಲದವರು ನಿಷ್ಕಲದಲ್ಲಿ ನಿಜವನೈದುವ ಪರಿ ಎಂತಯ್ಯಾ ಲಿಂಗವ ಹೋಗಾಡಿದೆನೆಂಬ ನಿಂದೆಯ ಪ್ರಮಥರು ನುಡಿವುತ್ತಿರಲು ಲಿಂಗೈಕ್ಯವೆಂತಪ್ಪುದು ಹೇಳಾ ನಿಮ್ಮ ಪ್ರಮಥರು ಮೆಚ್ಚಿ ಅಹುದೆಂದು ಒಡಂಬಟ್ಟು ಎನ್ನ ಮನ ತಾರ್ಕಣೆಯಲ್ಲಿಪ್ಪಂತೆ ನಿಮ್ಮಲ್ಲಿ ಐಕ್ಯವ ಮಾಡಾ ಕೂಡಲಸಂಗಮದೇವಪ್ರಭುವೆ.
--------------
ಬಸವಣ್ಣ
ಸರ್ವಾವಧಾನಿ ಸಮಯಪ್ರಸಾದಿ ನೋಡಯ್ಯಾ, ಲಿಂಗಾರ್ಪಿತದಲ್ಲಿ ಸರ್ವಾವಧಾನಿ ನೋಡಯ್ಯಾ, ಅಯ್ಯಾ, ಅನಾಹತಂಗಳ ಮುನ್ನವೆ ಇರಲೀಯ, ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣಂಗೆ ನಮೋ ನಮೋ ಎನುತಿರ್ದೆನು.
--------------
ಬಸವಣ್ಣ
ಸ್ಥೂಲತನುವೆಂಬ ಭಾಂಡದಲ್ಲಿ ಸರ್ವಾಚಾರವೆಂಬ ಸಯದಾನವ ತುಂಬಿದೆ ತುಂಬಲೊಡನೆ ಅಗ್ನಿಯಿಲ್ಲದ ಮುನ್ನ ಪಾಕವಾಯಿತ್ತು, ಮೇಲು ಸಾಧನವಿಲ್ಲದ ಮುನ್ನ ರುಚಿ ಪಕ್ವವಾಯಿತ್ತು. ಅದನು ಸೂಕ್ಷ್ಮತನುವೆಂಬ ಭಾಂಡದಲ್ಲಿ ಬರಿಕೆಯ್ದು, ಕಾರಣತನುವಿನಲ್ಲಿ ಕುಳ್ಳಿರ್ದು ಊಡೆಹೆನೆಂದನುಮಾಡಲು, ಪ್ರಕೃತಿಯಳಿದು ಒಂದೆ ಭಾಂಡವಾದುದ ಕಂಡು ಉಣಲೊಲ್ಲದೆ ಅನ್ಯರಿಗಿಕ್ಕದೆ, ಎನ್ನದೆನ್ನದೆ, ಸಯದಾನಂಗಳ ತೆಗೆದುಕೊಳ್ಳದೆ, ಬೀಸರವೋಗದೆ, ಒಂದರೊಳಗೊಂದಿತ್ತೆನ್ನದೆ ಉಂಡು ಸುಖಿಯಾದೆನಯ್ಯಾ, ಕೂಡಲಸಂಗಮದೇವಾ.
--------------
ಬಸವಣ್ಣ
ಸಕಲಕ್ರಿಯೆಗಳಿಗಿದು ಕವಚ, ಸಕಲವಶ್ಯಕ್ಕಿದು ಶುಭತಿಲಕ, ಸಕಲಸಂಪದಕ್ಕೆ ತಾಣವಿದು, ಅಘಟಿತ ಘಟಿತವೆನಿಸುವ ಅನುಪಮ ತ್ರಿಪುಂಡ್ರ. ಅಣುಮಾತ್ರ ವಿಭೂತಿಯ ಪಣಿಯೊಳಿಡೆ ಎಣಿಕೆಯಿಲ್ಲದ ಭವಪಾಶ ಪರಿವುದು. ತ್ರಿಣಯ ನೀನೊಲಿದು ಧರಿಸಿದೆಯೆಂದೆನೆ, ಆನು ಧರಿಸಿ ಬದುಕಿದೆ ಕೂಡಲಸಂಗಯ್ಯಾ.
--------------
ಬಸವಣ್ಣ
ಸಂಚಲವಿಲ್ಲದ, ಭಕ್ತಿವಂಚನೆಯಿಲ್ಲದ ಮಹಾಂತರ ತೋರಾ. ತನುಶುಚಿ ಮನಶುಚಿಗಳನು ತೋರಾ, ಇಂತಪ್ಪ ಶಿವಲಿಂಗೈಕ್ಯರ ತೋರಿ ಬದುಕಿಸು, ಕೂಡಲಸಂಗಮದೇವಾ.
--------------
ಬಸವಣ್ಣ
ಸಂಸಾರಸರ್ಪನ ಹೇಳಿಗೆಯ ಬಿಡಿಸಲು ಬಾರದು, ಬಿಟ್ಟಡೆ ಕಟ್ಟಲು ಬಾರದು ನೋಡಾ. ಬಿಡಿಸುವ ಬೆಡಗಿನ್ನೆಂತೊ ! ಕಾಮಕ್ರೋಧಲೋಭಮೋಹಮದಮತ್ಸರವೆಂಬ ವಿಷದ ಹಲ್ಲಿಂಗಾವುದು ಗಾರುಡವಯ್ಯಾ, ಮಹಾದಾನಿ ಕೂಡಲಸಂಗಮದೇವಾ
--------------
ಬಸವಣ್ಣ
ಸತ್ಯ ಸದಾಚಾರ ಸಂಬಂಧವಾದ ಭೃತ್ಯಾಚಾರ ಎನಗಿಲ್ಲಯ್ಯಾ, ಆನು ನಿಮ್ಮ ನೆನೆಯಲು ಎನಗೆ ಭಕ್ತಿಯಿಲ್ಲಯ್ಯಾ, ಕರುಣದಿಂ ಕೃಪೆ ಮಾಡಾ, ಕೂಡಲಸಂಗಮದೇವಾ.
--------------
ಬಸವಣ್ಣ
ಸಮತೆ ಸನ್ಮತದಿಂದ ನಿಜಗುಣಕಾರಣದಿಂದ ಸತ್ವರಜಸ್ತಮದ ಕ್ರೋಧ ಉಳಿಯದನ್ನಕ್ಕರ ಅನುಭಾವವೆಲ್ಲಿಯದೊ ಆತ್ಮಸ್ತುತಿ, ಪರನಿಂದೆ, ಅಸಹ್ಯ, ಅನೃತ, [ಕು]ತರ್ಕ ಉಡುಗದನ್ನಕ್ಕರ ಅನುಭಾವವೆಲ್ಲಿಯದೊ ಅರಿಷಡ್ವರ್ಗ ದಶವಾಯುಗಳ ವಿಕಳ ಅಪಾನ ಬಿಡದನ್ನಕ್ಕರ ಅನುಭಾವವೆಲ್ಲಿಯದೊ ಮದ ಮತ್ಸರ ವೈತಾಳ ಸಂವಾದವಲ್ಲದೆ ಅನುಭಾವವೆಲ್ಲಿಯದೊ ಸಮತೆ, ಸಜ್ಜನಿಕೆ, ಸಮಯಾಚಾರದ ನಿಜಪದವು ದುರಾಚಾರಿಗಳಿಗಳವಡುವುದೆ ನಮ್ಮ ಕೂಡಲಸಂಗನ ಶರಣರಿಗಲ್ಲದೆ ಅನುಭಾವವೆಲ್ಲರಿಗೆಲ್ಲಿಯದೊ
--------------
ಬಸವಣ್ಣ
ಸಟೆಯಿಲ್ಲದಂತೆ, ಪ್ರಪಂಚವಿಲ್ಲದಂತೆ, ವೈಶಿಕವಿಲ್ಲದಂತೆ, ನಡೆಸಯ್ಯಾ ಲಿಂಗತಂದೆ. ಒಂದು ನಿಮಿಷವಾದಡೆಯೂ ನಿಮ್ಮ ಶರಣರ ಸಂಗದಲ್ಲಿರಿಸಯ್ಯಾ. ಬೇರೆ ಮತ್ತೆ ಅನ್ಯವ ತೋರದಿರಯ್ಯಾ. ಹೊಲಬುಗೆಟ್ಟೆನಯ್ಯಾ, ಕೂಡಲಸಂಗಮದೇವಾ. 61
--------------
ಬಸವಣ್ಣ
ಸತ್ಯ ಶೌಚ ನಿತ್ಯನೇಮವ ತಪ್ಪದೆ ಮಾಡಬಲ್ಲಡೆ ಅದು ಲೇಸು. ಮತ್ಸ್ಯ ಕೂರ್ಮ ಮಂಡೂಕ ಜಲದೊಳಗಿರ್ದಲ್ಲಿ ಫಲವೇನು ಚಿತ್ತಮಂತರ್ಗತಂ ದೃಷ್ಟ್ವಾ ತೀರ್ಥಸ್ನಾನಾನ್ನ ಶುಧ್ಯತಿ ಶತಕುಂಭಜಲೇ ಶೌಚಂ ಸುರಾಭಾಂಡಮಿವಾ[s] ಶುಚಿಃ ಆಗಡವ ಮಾಡಿ ಮಾಗುಡವ ಮಿಂದಡೆ, ತಾ [ಕೂ]ಡಬಲ್ಲನೆ ಕೂಡಲಸಂಗಮದೇವ
--------------
ಬಸವಣ್ಣ
ಸಮಯವಿರುದ್ಧಕಂಜಿ ವಿನಯವ ನುಡಿವೆ, ಕೊಂದಡೆ ಕೊಲ್ಲು, ಕಾಯ್ದಡೆ ಕಾಯಿ. ಎ ನ್ನವರೆಂದು ಮನ ಹಿಡಿಯದು, ಕೂಡಲಸಂಗಮದೇವಾ.
--------------
ಬಸವಣ್ಣ
ಸೂತ್ರಧಾರಿ ಮನದ ಮೈಲಿಗೆಯ ಕಳೆಯಬಂದನಯ್ಯಾ ಮಡಿವಾಳನು. ಎನ್ನ ಕಾಯದ ಮೈಲಿಗೆಯ ತಂದು ತನ್ನ ಮುಂದೆ ಇರಿಸಿದೆಡೆ ಸಮತೆಯೆಂಬ ಕೂಪತೋಹಿನಲ್ಲಿ ಅದ್ದಿ, ಕಟ್ಟಿ ಹಿಳಿದನಯ್ಯಾ. ಪಂಚೇಂದ್ರಿಯವರ್ಗಂಗಳ ಜ್ಞಾನವೆಂಬ ನಿರ್ಮಲಜಲದಲ್ಲಿ ಅಲುಬಿ ಸೆಳೆದನಯ್ಯಾ. ರವಿಶಶಿಶಿಖಿಯ ತೇಜದಲ್ಲಿ ಆರಿಸಿದನು, ಚತುರ್ದಶ ಷೋಡಶವೆಂಬ ಘಳಿಗೆಯ ಮಾಡಿದನು. ಸಮಾಧಾನವೆಂಬ ಅಡ್ಡೆಯ ಮೇಲಿರಿಸಿ ಸಮಗುಣವೆಂಬ ಕೊಡತಿಯಲ್ಲಿ ಘಟ್ಟಿಸಿದನು. ಹರಿಯಿತ್ತಯ್ಯಾ ಸೆರಗು ಮೂರಾಗಿ. ಆ ಮೂರರಿವೆಯ ಕೊಟ್ಟನಯ್ಯಾ, ಎನ್ನ ಕೈಯಲ್ಲಿ, ಆ ಅರಿವೆಯ ಗುರುವಿಂಗೊಂದ ಕೊಟ್ಟೆನು, ಲಿಂಗಕ್ಕೊಂದ ಕೊಟ್ಟೆನು, ಜಂಗಮಕ್ಕೊಂದ ಕೊಟ್ಟೆನು. ಎನಗೆ ಕೊಟ್ಟ ಮೂರರಿವೆಯನೂ ಒಂದುಮಾಡಿ ಹೊದೆದುಕೊಂಡು ನಿಶ್ಚಿಂತನಾಗಿ, ಮಡಿವಾಳನ ಕೃಪೆಯಿಂದಲಾನು ಬದುಕಿದೆನು ಕಾಣಾ, ಕೂಡಲಸಂಗಮದೇವಾ.
--------------
ಬಸವಣ್ಣ
ಸಮಸ್ತ ಕತ್ತಲೆಯ ಮಸಕವ ಕಳೆದಿಪ್ಪ ಇರವ ನೋಡಾ ! ಬೆಳಗಿಗೆ ಬೆಳಗು ಸಿಂಹಾಸನವಾಗಿ, ಬೆಳಗು ಬೆಳಗ ಕೂಡಿದ ಕೂಟವ ಕೂಡಲಸಂಗಯ್ಯ ತಾನೆ ಬಲ್ಲ !
--------------
ಬಸವಣ್ಣ
ಸೂಳೆಗೆ ಮಚ್ಚಿ ಸೂಳೆಯ ಬಂಟರೆಂಜಲ ತಿಂಬುದೀ ಲೋಕ. ಅಡಗ ಮಚ್ಚಿ ಸೊಣಗನೆಂಜಲ ತಿಂಬುದೀ ಲೋಕ. ಲಿಂಗವ ಮಚ್ಚಿ ಜಂಗಮಪ್ರಸಾದವ ಕೊಂಬವರ ನೋಡಿ ನಗುವವರ ಕುಂಭಿಪಾತಕ ನಾಯಕನರಕದಲ್ಲಿಕ್ಕುವ ಕೂಡಲಸಂಗಮದೇವ.
--------------
ಬಸವಣ್ಣ
ಸದ್ಭಕ್ತಂಗೆಯೂ ಜಂಗಮಕ್ಕೆಯೂ ಭಾಜನ ಬೇರೆಂಬ ಶಾಸ್ತ್ರದ ಸದಗರು ನೀವು ಕೇಳಿರೋ. ಭಕ್ತದೇಹಿಕ ದೇವನೆಂದು ಶ್ರುತಿ ಸಾರುತ್ತಿವೆ, ಅರಿದು ಮರೆಯದಿರಿ, ಮರವೆಯಿಂದ ಬ್ರಹ್ಮ ಶಿರವ ಹೋಗಾಡಿಕೊಂಡ, ಮರವೆಯಿಂದ ದಕ್ಷ ಶಿರವ ನೀಗಿ ಕುರಿದಲೆಯಾದುದನರಿಯಿರೆ ಮರೆಯದೆ ವಿಚಾರಿಸಿ ನೋಡಿ, ಭಕ್ತಂಗೂ ಲಿಂಗಕ್ಕೂ ಭಿನ್ನವಿಲ್ಲ. ಇನ್ನು ಆ ಭಕ್ತಂಗೆಯೂ ಆ ಜಂಗಮಕ್ಕೆಯೂ ಭೇದವಿಲ್ಲ. ಬೇರ್ಪಡಿಸಿ ನುಡಿಯಲುಂಟೆ ಇನ್ನು ಆ ಗುರುವಿಂಗೆಯೂ ಆ ಭಕ್ತಂಗೆಯೂ ಸಂಕಲ್ಪವಿಲ್ಲ. ಅದೆಂತೆಂದಡೆ; ಮೆಟ್ಟುವ ರಕ್ಷೆ, ಮುಟ್ಟುವ ಯೋನಿ, ಅಶನ, ಶಯನ, ಸಂಯೋಗ, ಮಜ್ಜನ, ಭೋಜನ ಇಂತಿವನು ಗುರುಲಿಂಗಜಂಗಮ ಸಹಿತವಾಗಿ ಭೋಗಿಸುವ ಸದ್ಭಕ್ತಂಗೆ ನಾನು ನಮೋ ನಮೋ ಎಂಬೆನು. ಅದೆಂತೆಂದಡೆ; ಅರ್ಥಪ್ರಾಣಾಭಿಮಾನಂ ಚ ಗುgõ್ಞ ಲಿಂಗೇ ಚ ಜಂಗಮೇ± ತಲ್ಲಿಂಗಜಂಗಮಪ್ರಾಣಂ ಭಕ್ತಸ್ಥಲಮುದಾಹೃತಮ್ ಎಂದುದಾಗಿ, ಇದನರಿದು ಅರ್ಥವನೂ ಪ್ರಾಣವನೂ ಅಭಿನವನೂ ಗುರುಲಿಂಗಜಂಗಮಕ್ಕೆ ಸಮರ್ಪಿಸಿ ಆ ಗುರುಲಿಂಗಜಂಗಮವೆ ಪ್ರಾಣವಾಗಿಹ ಸದ್ಭಕ್ತಂಗೆಯೂ ಆ ಗುರುಲಿಂಗಜಂಗಮಕ್ಕೆಯೂ ಏಕಭಾಜನವಲ್ಲದೆ ಏಕಭೋಜನವಲ್ಲದೆ, ಭಿನ್ನಭಾಜನ ಭಿನ್ನಭೋಜನವುಂಟೆ _ಇಲ್ಲವಾಗಿ, ಅದೇನು ಕಾರಣವೆಂದಡೆ; ಆ ಸದ್ಭಕ್ತನ ಅಂಗವೆಂಬ ಗೃಹದಲ್ಲಿ ಜಂಗಮವಿಪ್ಪನಾಗಿ ಇದನರಿದು ಬೇರೆ ಮಾಡಿ ನುಡಿಯಲಾಗದು. ಚೆನ್ನಯ್ಯನೊಡನುಂಬುದು ಆವ ಶಾಸ್ತ್ರ ಕಣ್ಣಪ್ಪ ಸವಿದುದ ಸವಿವುದಾವ ಶಾಸ್ತ್ರ ಭಕ್ತದೇಹಿಕ ದೇವನಾದ ಕಾರಣ. ಅದೆಂತೆಂದಡೆ; ಭಕ್ತಜಿಹ್ವಾಗ್ರತೋ ಲಿಂಗಂ ಲಿಂಗಜಿಹ್ವಾಗ್ರತೋ ರುಚಿಃ ರುಚ್ಯಗ್ರೇ ತು ಪ್ರಸಾದೋಸ್ತು ಪ್ರಸಾದಃ ಪರಮಂ ಪದಂ ಇಂತೆಂಬ ಪುರಾಣವಾಕ್ಯವನರಿದು ಸದ್ಭಕ್ತನೂ ಗುರುಲಿಂಗಜಂಗಮವೂ ಈ ನಾಲ್ವರೂ ಒಂದೆ ಭಾಜನದಲ್ಲಿ ಸಹಭೋಜನಮಾಡುವರಿಂಗೆ ಇನ್ನೆಲ್ಲಿಯ ಸಂಕಲ್ಪವೊ, ಇನ್ನೆಲ್ಲಿಯ ಸೂತಕವೋ, ಇನ್ನೆಲ್ಲಿಯ ಪಾತಕವೋ ಕೂಡಲಸಂಗಮದೇವಾ.
--------------
ಬಸವಣ್ಣ
ಸತಿಪುರುಷರಿಬ್ಬರೂ ಪ್ರತಿದೃಷ್ಟಿಯಾಗಿ ಮಾಡಬಲ್ಲಡೆ ಅದೆ ಮಾಟ, ಕೂಡಲಸಂಗಮದೇವರ ಕೂಡುವ ಕೂಟ.
--------------
ಬಸವಣ್ಣ
ಸ್ಥಾವರ ಜಂಗಮವೆಂಬ ಉಭಯ ಪಕ್ಷ ಒಂದೆ; ಆವ ಮುಖದಲಿ ಬಂದಡೂ ತೃಪ್ತಿಯೊಂದೆ, ಕೂಡಲಸಂಗಮದೇವರ ಆಪ್ಯಾಯನವೊಂದೆ.
--------------
ಬಸವಣ್ಣ

ಇನ್ನಷ್ಟು ...