ಅಂಬರದ ಪಕ್ಷಿಗೆ ಕಾಲಾರು, ತಲೆ ಮೂರು,
ಬಾಲೆರಡು, ಕಣ್ಣೊಂದು, ಕೈ ಆರಾಗಿ,
ನಡೆದರೆ ಹೆಜ್ಜೆಯಿಲ್ಲ, ನುಡಿದರೆ ಶಬ್ದವಿಲ್ಲ.
ಅನ್ನ ಉದಕವನೊಲ್ಲದೆ ಅಗ್ನಿಯ ಸೇವಿಸುವದು.
ಆ ಮೃಗವ ಕಣ್ಣಿಲ್ಲದೆ ನೋಡಿ,
ಕಾಲಿಲ್ಲದೆ ನಡೆದು, ಕೈಯಿಲ್ಲದೆ ಪಿಡಿದು,
ಬಾಯಿಲ್ಲದೆ ನುಂಗಿ ಬೇಟೆಯನಾಡುವೆನಯ್ಯ
ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ
ನಿರ್ಮಾಯಪ್ರಭುವೆ.