ಅಯ್ಯಾ, ಅಸ್ಥಿ ಚರ್ಮ ಮಾಂಸ ಶುಕ್ಲ ಶೋಣಿತದ ಗುಡಿಯ ಕಟ್ಟಿ,
ಹಂದಿಯ ದೇವರ ಮಾಡಿ ಕುಳ್ಳಿರಿಸಿ,
ಪಾದರಕ್ಷೆಯ ಪೂಜೆಯ ಮಾಡಿ
ನೈವೇದ್ಯವ ಹಿಡಿದು, ಮೂತ್ರದ ನೀರ ಕುಡಿಸಿ,
ಶ್ವಾನ ಕುಕ್ಕುಟನಂತೆ ಕೂಗಿ ಬೊಗುಳಿ,
ದಡದಡ ನೆಲಕ್ಕೆ ಬಿದ್ದು ಕಾಡಿ ಕೊಂಡು
ಆ ದೇವರ ಒಡೆಯ ಮಾರೇಶ್ವರ
ಕಂಡ ಹೆಂಡ ಕೊಡುವನಲ್ಲದೆ ಅನ್ನ ನೀರು ಕೊಡುವನೆ ?
ಆ ದೇವರಿಗೆ ಹೊಲೆಯರು ಮಚ್ಚುವರಲ್ಲದೆ,
ಉತ್ತಮರು ಮಚ್ಚರು ನೋಡಯ್ಯ, ಮಸಣಯ್ಯಪ್ರಿಯ ಮಾರೇಶ್ವರಲಿಂಗವೆ.