ವಾರಿಯಿಂದಾದ ಮುತ್ತು ಶಾಂತಿಯ ಜಲದಲ್ಲಿ ಹಾಕಲಿಕಾಗಿ,
ಮುನ್ನಿನ ಎನ್ನಯ ವಾರಿ ಬಂದಿತ್ತೆಂದು ತಾ ಗಟ್ಟಿಗೊಂಡುದಿಲ್ಲ.
ಈ ಮುತ್ತು ತದ್ಭಾವ ಅಪ್ಪುವಿನಂತಾದುದಿಲ್ಲ.
ಈ ಉಭಯದ ಭೇದವ ತಿಳಿದಡೆ, ದ್ವೈತಾದ್ವೈತವ ಬಲ್ಲರೆಂಬೆ.
ಹೀಂಗಲ್ಲದೆ ಗೆಲ್ಲಸೋಲಕ್ಕೆ ಹೋರುವ ಕಲ್ಲೆದೆಯವರಿಗೆಲ್ಲಿಯದೊ,
ಗೋಳಕಾಕಾರ ವಿಶ್ವವಿರಹಿತ ಲಿಂಗವು ಸಾಧ್ಯವಪ್ಪುದು ?