ಚಂದ್ರ ತಾರಾ ಮಂಡಲಕ್ಕೆ ಒಂದೆರಡು ಯೋಜನಪ್ರಮಾಣು
ಹರಿವ ಕಂಗಳು, ಒಂದು ಸಾಸಿವೆರಜ ತನ್ನ ತಾಗದು.
ಛಂದಸ್ಸು ನಿಘಂಟು ವ್ಯಾಕರಣ ಅದ್ವೈತ ವೇದ ಶಾಸ್ತ್ರ
ಪುರಾಣವನೋದಿಕೊಂಡು ಮುಂದಣವರಿಗೆ ಹೇಳುವರಲ್ಲದೆ,
ತನ್ನೊಳಗಣ ಶುದ್ಧಿಯ ತಾನರಿಯದೆ ಅನ್ಯರಿಗೆ ಉಪದೇಶವ ಹೇಳುವ
ಬಿನುಗುಜಾತಿಗಳ ನುಡಿಯ, ಕೇಳಲಾಗದೆಂದ, ಕಲಿದೇವರದೇವಯ್ಯ