ಊರ್ವಸಿ ಕರ್ಪೂರವ ತಿಂದು
ಎಲ್ಲರಿಗೆ ಮುತ್ತ ಕೊಟ್ಟಡೆ ಮಚ್ಚುವರಲ್ಲದೆ,
ಹಂದಿ ಕರ್ಪೂರವ ತಿಂದು
ಎಲ್ಲರಿಗೆ ಮುತ್ತ ಕೊಟ್ಟಡೆ ಮಚ್ಚುವರೆ,
ಹುಡುಹುಡು ಎಂದಟ್ಟುವರಲ್ಲದೆ ?
ನಡೆನುಡಿ ಶುದ್ಧವುಳ್ಳವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರಲ್ಲದೆ,
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರೆ ?
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ
ಆ ಹಂದಿಗಿಂದ ಕರಕಷ್ಟ,
ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ.