ಬಿತ್ತಿದ ಬಿತ್ತು, ಪೃಥ್ವಿಯ ಕೂಟ ಅಪ್ಪುವಿನ ದ್ರವದಿಂದ
ಮಸ್ತಕ ಒಡೆವುದಲ್ಲದೆ,
ಉಷ್ಣದ ಡಾವರಕ್ಕೆ, ಬೆಂಕಿಯ ಬೇಗೆಗೆ ಮಸ್ತಕ ಒಡೆವುದುಂಟೆ ?
ಲಿಂಗವು ಭಕ್ತಿಯ ಶ್ರದ್ಧೆಗೆ, ವಿಶ್ವಾಸದ ಸುಸಂಗಿಗೆ,
ನಿಶ್ಚಯವಪ್ಪ ಲಿಂಗಿಗೆ ದೃಷ್ಟವಪ್ಪುದಲ್ಲದೆ,
ಉನ್ಮತ್ತವಪ್ಪ ವಿಶ್ವಾಸಘಾತಕಂಗೆ, ವಂದಿಸಿ ನಿಂದಿಸುವಂಗೆ,
ಹಿಂದೆ ಮುಂದೆ ಬಂದುದ ಬಾಯ್ಗಿಡುವವಂಗೆ
ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನ ಸಂಧಿಸನವಗೆ