ಅಥವಾ
(7) (2) (0) (1) (3) (0) (0) (0) (4) (3) (0) (1) (0) (0) ಅಂ (3) ಅಃ (3) (11) (0) (2) (1) (0) (1) (0) (2) (0) (0) (0) (0) (0) (0) (0) (6) (0) (0) (0) (7) (6) (0) (10) (5) (4) (0) (0) (0) (2) (6) (6) (0) (6) (8) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಆಕಾರವಿಲ್ಲದ ನಿರಾಕಾರದ ಮಂಟಪಕ್ಕೆ ನಿರಾಳವೆಂಬ ಗಂಡ ಬಂದು ಕುಳ್ಳಿರಲು, ಮೂವರು ಹೆಮ್ಮಕ್ಕಳು ಸೇವೆಯ ಮಾಡುವರು. ಇಬ್ಬರು ಸಂಗವ ಮಾಡುತ್ತಿಪ್ಪರು. ಒಬ್ಬಾಕೆ ಪುರುಷನ ನುಂಗಿಕೊಂಡಿಪ್ಪಳು. ಇವರರುವರ ಕೂಡೆ ಹೊಯಿಕೈಯಾಗಿಪ್ಪವನ ಕಂಡು, ಅನು ಪ್ರಭುದೇವರೆಂದರಿದು, ಆತನ ನಿಜಪಾದಕ್ಕೆರಗಿ, ಎನ್ನ ಭವವ ಹರಿದೆನು. ಮಹಾದಾನಿ ಸೊಡ್ಡಳನ ಕಂಡ ಕಡುಸುಖವನುಪಮಿಸಬಾರದು.
--------------
ಸೊಡ್ಡಳ ಬಾಚರಸ
ಆದಿಯನಾದಿ ಆಚಾರವ ಕಾಣದೆ, ಸಮಮಾನದ ಲಿಂಗದ ಘನವ ತಿಳಿಯದೆ, ದಾಸಿಯ ಸಂಗಂಗೆಯ್ವ ಜಂಗಮಾಚಾರ್ಯಜ್ಞಾನಪುರುಷರು ಚಿತ್ತೈಸಿ, ಶೈವಾರಾದನೆಯ ಸ್ಥಲದಂತೆ ನಡೆದು, ಗಳಹಿಕೊಂಡು ಇಪ್ಪಿರಿ. ಅಂಗದನಿತ ದಾಸೆಗೆ, ಪಂತಿಯ ಗಡಣದ ಹಸುವಿನಾಸೆಗೆ, ಕಾಂಚಾಣದ ಪಂತಿಯಾಸೆಗೆ, ಸ್ಥಲ ಜಂಗಮಸ್ಥಲವಾಸಿಯ ಗಡಣದಾಸೆಗೆ, ಪಂತಿ ಪಾದಾರ್ಚನೆಯ ಹಿರಿಯತನದ ಗಡಣ ಗಮಕದಾಸೆಗೆ, ಕೃತಿಯ ದ್ವೆ ೈತವ ನಟಿಸುವ ಪಂಚಮಹಾಪಾತಕದೇವರ ದೇವತ್ವದ ಬಲ್ಲರು ಕೇಳಿರಣ್ಣ. ನಾ ದೇವತಾದೇವನೆಂಬುದೊಂದು ಸಮದೇವತ್ವದ ಗಳಹುವಿರಿ. ಅಂಗದಲ್ಲಿ ಸೋವಿ ಮಾತ್ರವೆಂಬ ಸ್ತ್ರೀಯ ಆಲಿಂಗನಂಗೈದು ಗಳಹುವಿರಿ. ಶ್ರುತಿಃ ಅರ್ಧವಣಿ ಕಥಃ ಸೋವಿ ವಚಃ ಬಾದಿನಿ ಪರ್ವಣಃ | ಪಾಪಿಷ್ಟಾ ದುಷ್ಟದ್ರೋಹಿ ಚಾ ಪಾಪಿಷ್ಟ ಗುರುದ್ರೋಹಿ ಚಾ | ಗುರುಶಿವಚ್ಚೇದನ ತತ್ ಗುರುಷಾಮಾ ಚಿ ಅಪಹಿನ್ | ಗುರುಬಂಧನ ಗ್ರಾಹಿ ಚಃ | ಇಂತೆಂದುದಾಗಿ, ಸೋವಿಮಾತ್ರವೆಂದು ವಾಗದ್ವೈತವನುಂಟುಮಾಡಿ ಕಂಡು, ತಮ್ಮ ಸ್ವಯ ಇಚ್ಛೆಯ ಭಾವಕ್ಕೆ ಗಳಹಿಕೊಂಡು, ಹಿರಿಯರ ಮರೆಯಲ್ಲಿ ಕುಳಿತು, ಒಡಲ ಹೊರೆವ ಶೂಕರನಂತೆ, ತುಡುಗುಣಿತನಕ್ಕೆ ಗಡಣಿಸಿಕೊಂಡು ಹಿರಿಯರೆಂಬಿರಿ. ಶಿವಾಚಾರ ಃ ಗಿರಿಜಾನಾಥಂಗೆ ಗೌರಿ ತ್ರಿವಿಧವಿಧಮೇಕಾರ್ಥಕಲ್ಯಾಣ, ಗಿರಿಜಾಧಾರಿಯಲ್ಲಿ ಶಿವನ ದೇವತ್ವ ಕೆಟ್ಟಿತ್ತೆ ಪಾತಕರಿರಾ? ಸೋವಿಯ ಆಲಿಂಗನಂಗೈದು, ಚುಂಬನ ಕರ ಉರ ಜಘನ ಯೋನಿಚಕ್ರವ ಕೂಡಿ ನೆರೆದ ಬಳಿಕ, ಪ್ರಾತಃಕಾಲದಲ್ಲಿ ಹನ್ನೆರಡು ಜಂಗಮದೇವರಿಗೆ ಹನ್ನೆರಡು ಸುವರ್ಣಗಾಣಿಕೆಯನಿಕ್ಕಿ, ಹನ್ನೆರಡು ದ್ವಿವಸ್ತ್ರ, ಹನ್ನೆರಡು ತೆಂಗಿನಕಾಯಿಂದ ಹನ್ನೆರಡು ಜಂಗಮದೇವರಿಗೆ ಈ ಪರಿಯಾರ್ಥ ಅರ್ಚನೆಯ ಮಾಡಿದರೆ, ನವಭೋಗದೊಳಗಣ ತ್ರಿವಿಧ ಭಾಗೆಯ ಕಲೆಯಿರಣ್ಣ. ಅರಿದು ಮಾಡಿ ಮರದಂತೆ, ಬೆಬ್ಬನೆ ಬೆರೆತುಕೊಂಡಿರುವಾತ ಹಿರಿಯನಲ್ಲ. ಆತ ಗುರುವಲ್ಲ ಲಿಂಗವಲ್ಲ ಜಂಗಮವಲ್ಲ ಪಾದೋದಕ ಪ್ರಸಾದದೊಳಗಲ್ಲ. ಅವ ಅಮೇಧ್ಯ ಸುರ ಭುಂಜಕನು. ಇಂತೆಂಬ ಶ್ರುತಿಯ ಮೀರಿ ಆಚರಿಸುವ, ಬ್ರಹ್ಮರಾಕ್ಷಸ. ನವಕೋಟಿ ಯೋನಿಚಕ್ರದಲ್ಲಿ ರಾಟಾಳದ ಘಟದಂತೆ ತಿರುಗುವನು. ಆದಿಯ ವಚನದ ಸಮ್ಮತವಿದು, ಸೋವಿಯ ಸಂಗ ಆಲಿಂಗನಂಗೈವಿರಿ. ಸೋವಿಯ ಸಂಗ ಆಲಿಂಗನಂಗೈದವ, ಶತಕೋಟಿ ಶೂಕರಯೋನಿಯಲ್ಲಿ ಬಪ್ಪನು. ನವಕೋಟಿ ಗಾರ್ಧಭಯೋನಿಯಲ್ಲಿ ಬಪ್ಪನು. ಶತಕೋಟಿ ಕುಕ್ಕುಟಯೋನಿಯಲ್ಲಿ ಬಪ್ಪನು. ಸಚರಾಚರಯೋನಿ ಯೋನಿನವಕೋಟಿ ತಪ್ಪದು. ಅವಂಗೆ ಜನ್ಮ ಜನ್ಮಾಂತರದಲ್ಲಿ ಬಪ್ಪುದು ತಪ್ಪದು. ಇಂತಿದನರಿದು ಮರೆದೆಡೆ, ದೇವ ಮತ್ರ್ಯ ತಪರ್ಲೋಕಕ್ಕೆ ಸಲ್ಲಸಲ್ಲ, ಅಲ್ಲ ನಿಲ್ಲು, ಮಾಣು, ಹೊರಗಯ್ಯ. ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಹೊಯ್ಯೋ ಡಂಗುರವ, ದೇವರಾಯ ಸೊಡ್ಡಳಾ.
--------------
ಸೊಡ್ಡಳ ಬಾಚರಸ