ಜನ್ಮಾಂತರಸಹಸ್ರೇಷು ತಪೋಧ್ಯಾನಸಮಾಧಿಭಿಃ
ನರಾಣಾಂ ಕ್ಷೀಣಪಾಪಾನಾಂ ಶಿವಭಕ್ತಿಃ ಪ್ರಜಾಯತೇ
ಇಂತೆಂದುದಾಗಿ,
ಅನೇಕ ಜನ್ಮದ ಪಾಪಂಗಳು ಸವೆದು, ಶ್ರೀಗುರುಕಾರುಣ್ಯಮಂ ಪಡೆದು
ಶಿವಭಕ್ತನಾಗಿ ಶಿವಲಿಂಗವಂ ಧರಿಸಿ, ಶಿವಲಿಂಗದರ್ಶನಸ್ಪರ್ಶನಂ ಮಾಡಿ
ಇಷ್ಟಲಿಂಗ ಪ್ರಾಣಲಿಂಗಸಂಬಂಧ, ಅಂತರಂಗ ಬಹಿರಂಗ ಸರ್ವಾಂಗವಾದ ಬಳಿಕ
ಮರಳಿ ಆತ್ಮತತ್ತ್ವವ ವಿಚಾರಿಸಿ,
ಪರಮಾತ್ಮನಲ್ಲಿ ಯೋಗವ ಮಾಡಿ ಯೋಗಿಗಳಾದೆವೆಂಬಿರಿ.
ಅದೇನು ಕಾರಣ,
ಆತ್ಮನೇ ಪ್ರಾಣ, ಪರಮಾತ್ಮನೇ ಶಿವಲಿಂಗ.
ಇಂತೀ ಪ್ರಾಣಾತ್ಮನನೂ ಪರಮಾತ್ಮನಪ್ಪ ಶಿವಲಿಂಗವನೂ
ಶ್ರೀಗುರು ಯೋಗವ ಮಾಡಿ ತೋರಿಕೊಟ್ಟು, ಕರುಣಿಸಿದ ಬಳಿಕ
ಗುರ್ವಾಜ್ಞೆಯಂ ಮೀರಿ, ದ್ವಿಜರನು ಸನ್ಯಾಸಿಯನು
ಶ್ರೀಗುರ್ವಾಜ್ಞೆಯನರಿಯದ, ಶಿವನ ಮಹಾತ್ಮೆಯನರಿಯದ
ಶಿವಲಿಂಗವೇ ಪರಮಾತ್ಮನೆಂಬ ತಾತ್ಪರ್ಯವನರಿಯದ
ಈ ಭ್ರಷ್ಟರ ಮರಳಿ ಮರಳಿ ಗುರುವೆಂದು ಮಾಡಿ
ಉಪದೇಶವಂ ಮಾಡಿಸಿಕೊಳಬಹುದೆ?
ಶಿವ ಶಿವಾ! ಅದು ಗುರುದ್ರೋಹ, ಶ್ರೀಗುರು ತಪ್ಪಿ ಮಾಡಿದುದಿಲ್ಲ.
ಶ್ರೀಗುರು ಸರ್ವಧರ್ಮಂಗಳಿಗೆಯೂ
ಅಧಿಕಾಧಿಕವೆಂದು ಹೇಳಿ ತೋರಿಕೊಟ್ಟು ಕರುಣಿಸಿದ ಬಳಿಕ
ಆತ್ಮಯೋಗವೆಂದು ವೈದಿಕವೆಂದು ಸಕಲವೆಂದು ನಿಷ್ಕಲವೆಂದು
ವೈಷ್ಣವವೆಂದು ಮಾಯಾವಾದಿಗಳೆಂದು ಚಾರ್ವಾಕರೆಂದು ಬೌದ್ಧರೆಂದು
ಇತ್ಯಾದಿ ಭಿನ್ನದರ್ಶನಂಗಳಲ್ಲಿ ಧರ್ಮಶಾಸ್ತ್ರಂಗಳ ಕೇಳಿ
ಮರಳಿ ಉಪದೇಶವಂ ಮಾಡಿಸಿಕೊಳಬಹುದೆ?
ಶಿವ ಶಿವಾ ಅದು ಗುರುದ್ರೋಹ, ಶ್ರೀಗುರು ತಪ್ಪಿ ಮಾಡಿದುದಿಲ್ಲ.
ಶ್ರೀಗುರುವೇ ಪರಶಿವನಾಗಿ
`ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥೇ
ಎಂದುದಾಗಿ,
`ಶಿವ ಏಕೋ ಧ್ಯೇಯಃ
ಎಂದುದಾಗಿ,
ಶಿವನನೇ ಪೂಜಿಸಿ ಶಿವನನೇ ಧ್ಯಾನಿಸಿ
_ಎಂದು ಹೇಳಿ ತೋರಿಕೊಟ್ಟು ಕರುಣಿಸಿದ ಬಳಿಕ
ಶಿವನಿರ್ಮಾಲ್ಯಕಂ ಶುದ್ಧಂ ಭುಂಜೀಯಾತ್ ಸರ್ವತೋ ದ್ವಿಜ
ಅನ್ಯದೈವಸ್ಯ ನಿರ್ಮಾಲ್ಯಂ ಭುಕ್ತ್ಯಾಚಾಂದ್ರಾಯಣಂ ಚರೇತ್
ಇಂತೆಂದುದಾಗಿ,
ಪ್ರಸಾದವ ಕರುಣಿಸಿದನು ಶ್ರೀಗುರು.
ಆ ಶ್ರೀಗುರುವ ಭ್ರಷ್ಟನ ಮಾಡುವಿರಿ, ಗುರು ನಿಮ್ಮಿಚ್ಛೆಗೆ ಬಾರನಾಗಿ,
ಪೂರ್ವಪುರುಷರು ಮರುಳರು, ನೀನೊಬ್ಬನೇ ಬುದ್ಧಿವಂತನೇ?
ಕೆಡದಿರು ಕೆಡದಿರು.
ದೂರ್ವಾಸ, ಅಗಸ್ತ್ಯ. ಭೃಗು, ದಧೀಚಿ, ಮಾರ್ಕಂಡೇಯ
ಮೊದಲಾದ ಋಷಿಜನಂಗಳೆಲ್ಲರೂ
ಶಿವಲಿಂಗಪ್ರತಿಷೆ*ಯ ಮಾಡಿ ಶಿವಲಿಂಗಾರ್ಚನೆಯಂ ಮಾಡಿದರು.
ಇವರೆಲ್ಲರು ಮರುಳುಗಳು, ನೀನೊಬ್ಬನೇ ಬುದ್ಧಿವಂತನೇ?
ಕೆಡದಿರು ಕೆಡದಿರು.
ಮತ್ತೆ ವಿಷ್ಣು ಬ್ರಹ್ಮ ಇಂದ್ರ ಮೊದಲಾಗಿ
ಶಿವಲಿಂಗಪ್ರತಿಷೆ*ಯಂ ಮಾಡಿ ಶಿವಲಿಂಗಾರ್ಚನೆಯಂ ಮಾಡಿದರು.
ಇವರು ಮಾಡಿದುದಕ್ಕೆ ದೃಷ್ಟವ ನೋಡಿರೆ:
ಮತ್ಸ್ಯಕೇಶ್ವರ, ಕೂರ್ಮೇಶ್ವರ, ಮಾಹೇಶ್ವರ, ರಾಮೇಶ್ವರವೆಂದು
ಲಿಂಗಪ್ರತಿಷೆ*ಯಂ ಮಾಡಿ ಶಿವಲಿಂಗಾರ್ಚನೆಯಂ ಮಾಡಿದರು.
ಇವರುಗಳೆಲ್ಲರು ಮರಳರು, ನೀನೊಬ್ಬನೇ ಬುದ್ಧಿವಂತನೇ?
ಕೆಡದಿರು ಕೆಡದಿರು.
ಹರಿಶ್ಚಂದ್ರ ಮೊದಲಾದ ಚಕ್ರವರ್ತಿಗಳು
ಶಿವಲಿಂಗಪ್ರತಿಷೆ*ಯಂ ಮಾಡಿ ಶಿವಲಿಂಗಾರ್ಚನೆಯಂ ಮಾಡಿದರು.
ಇವರು ಮಾಡಿದುದಕ್ಕೆ ದೃಷ್ಟವ ನೋಡಿರೆ:
ಕಾಶೀಪುರದಲ್ಲಿ ಇಂದ್ರೇಶ್ವರ, ಬ್ರಹ್ಮೇಶ್ವರ, ಯಕ್ಷಸಿದ್ಧೇಶ್ವರವೆಂದು
ಲಿಂಗಪ್ರತಿಷೆ*ಯಂ ಮಾಡಿ ಶಿವಲಿಂಗಾರ್ಚನೆಯ ಮಾಡಿದರು.
ಇವರೆಲ್ಲರೂ ಮರುಳುಗಳು, ನೀನೊಬ್ಬನೇ ಬುದ್ಧಿವಂತನೇ?
ಕೆಡದಿರು, ಕೆಡದಿರು.
ತಾರಕಾಸುರ ರಾವಣಾದಿಗಳೆಲ್ಲರೂ
ಶಿವಲಿಂಗಪ್ರತಿಷೆ*ಯಂ ಮಾಡಿ, ಶಿವಲಿಂಗಾರ್ಚನೆಯಂ ಮಾಡಿದರು.
ಇವರೆಲ್ಲರೂ ಮರುಳುಗಳು, ನೀನೊಬ್ಬನೇ ಬುದ್ಧಿವಂತನೇ?
ಇದು ಕಾರಣ,
ಶ್ರೀಗುರುವೆ ಅಧಿಕ, ಶಿವಲಿಂಗವೇ ಅಧಿಕ
ಶಿವಲಿಂಗಾರ್ಚನೆಯೇ ಅಧಿಕ, ಆ ಸಂಗವೇ ಸಂಗ,
ಶ್ರೀಗುರುಲಿಂಗಜಂಗಮದ ಪೂಜೆಯೇ ಪೂಜೆ,
ಅರ್ಚನೆಯೇ ಅರ್ಚನೆ, ಆ ಸಂಗವೇ ಸಂಗ ಕಾಣಾ
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.