ತಾನು ಈಶನೆಂಬುದನು ತಾನರಿದು,
ಮಾನೀಶನೆಂಬುದನು ತಾನರಿದು.
ತಾನೆ ತಾನಾಗುವ ಸಕೀಲವನರಿಯದೆ
ಧ್ಯಾನಧಾರಣಸಮಾಧಿ ಯೋಗಾಂಗವೆಂಬ
ಯೋಗಧ್ಯಾನದಿಂದ ಅರಿಯ[ಬ]ಹುದೆ ಸ್ವಯಂಭು[ವ] ?
ಯೋಗಿ ದೇಹರಹಿತ, ಈ ದೇಹವಿಡದೇ
ವಿದೇಹಿಯಾಗುವ ಸಕೀಲಸಂಜ್ಞೆಯ ಅರಿಯಬಲ್ಲಂಥ
ಗುರುವಿನ ಕೃಪೆ ದೊರಕೊಳ್ಳುವತನಕ ಮನದಿಂದಲರಿಯಲುಂಟೆ ?
ಗುರುವಿನ ಕೃಪೆ ದೊರಕೊಳ್ಳುವತನಕ ಮನದಿಂದಲರಿಯಲುಂಟೆ ?
ತನ್ನ ಘನವು ಆ ಮನವು
ಮದಾವಸ್ಥೆಯಲ್ಲಿ ಮಗ್ನವಹುದಲ್ಲದೆ ಮಾಣದು ನೋಡಾ.
ಅದು ಮೂರುಗುಣ, ಅದು ತ್ರಿಪುಟಿ ಮಾಯಾ.
ಜಾಗ್ರತದಲ್ಲಿದ್ದ ವರ್ತನೆ ಸ್ವಪ್ನದಲ್ಲಿಲ್ಲ.
ಸ್ವಪ್ನದಲ್ಲಿದ್ದ ವರ್ತನೆ ಸುಷುಪ್ತಿಯಲ್ಲಿಲ್ಲ.
ಈ ಮನ ತಾನು ಹುಟ್ಟುಗುರುಡು
ಮೊದಲಿಂಗೆ ಹುಸಿ ವಿಲಕ್ಷಣಾದಿ
ಶಿವನೆತ್ತ, ಲಕ್ಷದಿಂದ ಅರಿಯಬೇಕೆಂಬ ಮನವೆತ್ತ, ಹೋಗುತ್ತ, ನೀನತ್ತ.
ಈ ಮನಸು ತಾನು ಮೊದಲಿಂಗಲ್ಲದೆ
ಹುಸಿಯೆಂದರಿಯದೆ ನದಿಯ ಸುಳಿಯಲ್ಲಿ ಬಿದ್ದ ಹುಳದಂತೆ
ಮುಳುಗುತ್ತ ಏಳುತ್ತ ತಿರುಗುವವರಿಗೆಲ್ಲ
ತನ್ನ ನಿಜವು ತನ್ನವೆಂದರ್ಥವಾಗುವುದೆ ? ಅದು ತಮ್ಮ ಇಚ್ಫೆ.
ಇದನರಿಯದೆ ಮನ ಸಮಾಧಿಯ ಮಾಡಬೇಕೆಂಬ ಮಹಾಗಣಂಗಳು
ಇಂತಿವರಲ್ಲ.
ಮಹಾಗಣಂಗಳು ಮಹಾಜ್ಞಾನಿಗಳು ಇಂತಿವರಲ್ಲ.
ಮತ್ರ್ಯದಲ್ಲಿ ಎನ್ನದೊಂದು ವಂಶವೆಂದಾತ
ನಮ್ಮ ವೀರ ಸದ್ಗುರು ಪರಂಜ್ಯೋತಿ ಮಹಾವಿರಕ್ತಿ.