ಬಹಳ ಬಹಳ ಕಂಡೆನೆಂದು ನುಡಿವ,
ಬಿಸಿಲು ಮಧ್ಯಾಹ್ನದಲ್ಲಿ ಚಂದ್ರಬಿಂಬ ಉದಯವಾದ
ಪ್ರತ್ಯಕ್ಷವಾಯಿತ್ತೆಂದು ಹೊರಗೆ ಕಂಡು
ಒಳಗೆ ಕಂಡನಲ್ಲದೆ ಏನು ಅಪ್ಪುದು ಕಾಣಾ.
ಎರಡೂ ಒಂದೇ.
ಮುಂದೆ ಮೀರಿ ಮನಸಮಾದ್ಥಿ ಮಾಡಿದಡೆ
ಮುಕ್ತಿಯೆಂದು ಹೇಳುವರು.
ಮನ ಮುಳುಗಿದುದೆ ಲಿಂಗವೆಂದೆಂಬರು.
ಆ ಲಿಂಗ ಮುಳುಗುವುದು ಸಮಾದ್ಥಿ ಕಾಣಾ,
ತಾನಳಿದ ಮೇಲೆ ಮುಕ್ತಿ ಯಾರಿಗೆ ಹೇಳಾ ?
ಲಿಂಗಕ್ಕೆ ಅಳಿವು ಬೆಳವುಂಟೆ ಕಾಣಾ ?
ಚಿಂತಿಸಿ ಮುಳುಗಿದವರೆಲ್ಲ
ಕಡೆಯಿಲ್ಲ ಮೊದಲಿಲ್ಲ ನೋಡಾ.
ಇನ್ನು ಉಳಿದದ್ದು ಘನವು.
ಉಳಿಯೆ ಹೇಳಾ ನಿಜಕೆಲ್ಲ.
ಲಯವಿಲ್ಲ ಭಯವಿಲ್ಲದಾಡಿದ ವಿದೇಹ ತಾನಾದ
ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.