ದ್ಥೀರಪ್ರಸಾದ ವೀರಪ್ರಸಾದ ಆವೇಶಪ್ರಸಾದ.
ಇಂತೀ ತ್ರಿವಿಧಪ್ರಸಾದವ ಕೊಂಬಲ್ಲಿ
ಅಂಗವರತು ಇದಿರಿಂಗೆ ಭಯಭಂಗವಿಲ್ಲದೆ
ಬೆಗಡು ಜಿಗುಪ್ಸೆ ಚಿಕಿತ್ಸೆ ತಲೆದೋರದೆ
ಮಹಾಕುಂಭಘೃತಂಗಳ ಕೊಂಡಂತೆ.
ಮಹಾಮೇರುವೆಯ ಅಲ್ಪಮೊರಡಿ ದ್ಥಿಕ್ಕರಿಸಿ ಅಲ್ಲಿಗೆ ಹೋದಡೆ
ಅದರ ತಪ್ಪಲಲ್ಲಿಯೆ ತಾನಡಗಿದಂತೆ.
ಈ ಗುಣ ದೃಷ್ಟಪ್ರಸಾದಿಯ ಕಟ್ಟಿನ ಭೇದ.
ದಹನ ಚಂಡಿಕೇಶ್ವರಲಿಂಗವು ತಾನಾದ ಅಂಗದ ತೆರ.