ಮೂರ್ಖನಾಗಲಿ, ಪಂಡಿತನಾಗಲಿ,
ಬ್ರಹ್ಮಚಾರಿಯಾಗಲಿ, ಗೃಹಸ್ಥನಾಗಲಿ,
ವಾನಪ್ರಸ್ಥನಾಗಲಿ, ಯತಿಯಾಗಲಿ,
ಶ್ರೀ ವಿಭೂತಿಯನೊಲಿದು ಧರಿಸಿದಾತನೆ ಧನ್ಯನು.
ಆತನೇ ಸರ್ವಾಪತ್ತುಗಳ ತೊಲಗ ನೂಂಕಿ,
ಸಮಸ್ತ ಪಾತಕೋಪಪಾತಕಂಗಳು ತೊಲಗಿ,
ಶುದ್ಧಾತ್ಮನಹನಯ್ಯ.
``ತ್ರಿಪುಂಡ್ರಂ ಭಸ್ಮನಾ ಕರೋತಿ ಯೋ ವಿದ್ವಾನ್
ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋ ವಿದ್ವಾನ್
ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋ ಯತಿರ್ವಾ
ಸಮಸ್ತಪಾತಕೋ ಪಾತಕೇಭ್ಯಃ ಪೂತೋ ಭವತಿ'
ಎಂದು ಶ್ರುತಿ ಸಾರುತ್ತಿರೆ
ಇಂತಪ್ಪ ಶ್ರೀ ವಿಭೂತಿಯನರಿದು ಧರಿಸಿ,
ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ,
ಕೂಡಿರಣ್ಣಾ.